LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಶಾಲೆಯ ಮೆಟ್ಟಿಲಿನಲ್ಲಿ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು

https://x.com/YakkatiSowmith/status/2100942212137902537?ref_src=twsrc%5Etfw%7Ctwcamp%5Etweetembed%7Ctwterm%5E2100942212137902537%7Ctwgr%5Ea272b001c0de27ca3a3354cfb35027b374fd57da%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2026%2FSep%2F19%2Fwatch-class-4-student-dies-after-she-slips-falls-down-from-school-stairs-in-telangana

ಶಾದ್‌ನಗರ, ಸೆ. 19 : ಶಾಲೆಯ ಮೆಟ್ಟಿಲು ಹತ್ತುವ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು 9 ವರ್ಷದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರದಲ್ಲಿ ನಡೆದಿದೆ.

ಶಾದ್‌ನಗರದ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ. ವರ್ಣಿಕಾ (9) ಮೃತಪಟ್ಟ ವಿದ್ಯಾರ್ಥಿನಿ ಎಂದು ವರದಿಯಾಗಿದೆ.

ವರ್ಣಿಕಾ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲು ಹತ್ತುತ್ತಿದ್ದ ವೇಳೆ ಏಕಾಏಕಿ ಕಾಲುಜಾರಿ ಮುಖ ಕೆಳಗಾಗಿ ಬಿದ್ದಿದ್ದಾಳೆ. ಪರಿಣಾಮ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಶಾಲಾ ಸಿಬ್ಬಂದಿ ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಘಟನೆ

ಶಾಲೆಯ ಮೆಟ್ಟಿಲುಗಳ ಸಮೀಪ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವಿದ್ಯಾರ್ಥಿನಿ ಕಾಲುಜಾರಿ ಬೀಳುವ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಶಾದ್‌ನಗರ ಪೊಲೀಸರು ಪರಿಶೀಲಿಸುತ್ತಿದ್ದು, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಯ ಮೆಟ್ಟಿಲಿನಲ್ಲಿ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವುಹಾವೇರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ₹3.43 ಕೋಟಿ ದಂಡಕನಿಷ್ಠ ವೇತನ ಜಾರಿಗೆ ತಡೆ ನೀಡಿದ್ದ ಸುತ್ತೋಲೆಗಳಿಗೆ ಹೈಕೋರ್ಟ ತಡೆಅನಾರೋಗ್ಯದ ಹಿನ್ನೆಲೆ ಕೆಎಲ್‌ಇ ಆಸ್ಪತ್ರೆ ಉದ್ಘಾಟನೆಗೆ ಅಮಿತ ಶಾ ಗೈರುಅವರಾದಿ ಗ್ರಾಪಂ ಕಚೇರಿಯಲ್ಲಿ ತಂದೆ-ಮಗಳ ಹತ್ಯೆ: ಮೂವರು ಆರೋಪಿಗಳ ಬಂಧನಮಮತಾ ಬೆಂಬಲ ಘೋಷಿಸಿದ ಕೆಲವೇ ಗಂಟೆಗಳಲ್ಲಿ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನಮೋದಿ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ ಕಾಂಗ್ರೆಸ್ ಪ್ರತಿಭಟನೆಐಫೋನ್ 18 ಪ್ರೊ ಮಾರಾಟ ಆರಂಭ; ಆ್ಯಪಲ್ ಮಳಿಗೆಗಳ ಮುಂದೆ ಗ್ರಾಹಕರ ಸಾಲುನಿಥಾರಿ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಸುರೇಂದ್ರ ಕೋಲಿ ಶವವಾಗಿ ಪತ್ತೆ‘ಅಂಬಾರಿ’ಯಲ್ಲಿ ಸಿಎಂ, ಸಚಿವರ ಮೆರವಣಿಗೆ