LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಸಾಗಿಸುತ್ತಿದ್ದ ₹ 2.73 ಕೋಟಿ ವಶ

ಬೆಳಗಾವಿ : ಮಾಳಮಾರುತಿ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಗೂಡ್ಸ ವಾಹನದಲ್ಲಿ ಕ್ಯಾಬಿನ್ ನಿರ್ಮಿಸಿ ಸಾಗಿಸುತ್ತಿದ್ದ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಗೂಡ್ಸ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.



ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿಯ ಸಚಿನ ಮೇನಕುದಳೆ ಹಾಗೂ ಮಹಾರಾಷ್ಟ್ರದ ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ.



ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸಪೆಕ್ಟರ್ ನಂದೀಶ್ವರ ಕುಂಬಾರ ಹಾಗೂ ತಂಡವು ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಅಶೋಕ ಲೇಲ್ಯಾಂಡ್ ಗೂಡ್ಸ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.



ವಾಹನದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು, 2,73,27,500 ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ಹಣ ಸಾಗಣೆ ಮಾಡಲೆಂದೇ ಗೂಡ್ಸ ವಾಹನದ ಕ್ಯಾಬಿನ್ ನಲ್ಲಿ ಮಾರ್ಪಾಡು ಮಾಡಿರುವುದು ಕಂಡುಬಂದಿದೆ.



ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು