LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನರ್ಸಗಳ ಬಗ್ಗೆ ಅವಹೇಳನಕಾರಿ ರೀಲ್ಸ; 15 ಎಂಬಿಬಿಎಸ್ ವಿದ್ಯಾರ್ಥಿಗಳು ಅಮಾನತ್ತು

ಹುಬ್ಬಳ್ಳಿ, ೮- ನರ್ಸ‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿದ್ದಕ್ಕಾಗಿ ಕರ್ನಾಟಕ ಇನ್ಸಟಿಟ್ಯೂಟ ಮತ್ತು ಮೆಡಿಕಲ್ ಸೈನ್ಸ (ಕಿಮ್ಸ್) ನ 15 ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ.



ಅಲ್ಲದೇ ವಿಡಿಯೋದ ಕುರಿತು ವಿಚಾರಣೆ ನಡೆಸಲು ಏಳು ಸದಸ್ಯರ ಸಮಿತಿ ರಚಿಸಲಾಗಿದೆ. ನರ್ಸಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ ಮಾಡಿದ್ದ ಕಿಮ್ಸ ಎಂಬಿಬಿಎಸ್ ವಿದ್ಯಾರ್ಥಿಗಳು, ಭದ್ರ ಚಿತ್ರದ ಹಾಡಿಗೆ ರೀಲ್ಸ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಅದು ವೈರಲ್ ಆಗಿತ್ತು. ಇದರಿಂದ ಆಕ್ರೋಶಗೊಂಡ ನರ್ಸಗಳು ತಮ್ಮನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಕಿಮ್ಸ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ್ದರು ಹಾಗೂ ರೀಲ್ಸ ಮಾಡಿದ್ದ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಿಮ್ಸ ನಿರ್ದೇಶಕರು ಮತ್ತು ಆಡಳಿತ ಮಂಡಳಿಯವರನ್ನು ಆಗ್ರಹಿಸಿದ್ದರು.



ನಿರ್ದೇಶಕರು ಕಾಲೇಜಿನ 15 ಎಂಬಿಬಿಎಸ್ ವಿದ್ಯಾರ್ಥಿಗಳನ್ನು ತರಗತಿಗಳಿಂದ ಅಮಾನತು ಮಾಡಿದ್ದಾರೆ. ಜೊತೆಗೆ ಇದರ ವಿಚಾರಣೆಗಾಗಿ ಪ್ರಾಂಶುಪಾಲ ಡಾ. ಈಶ್ವರ ಹೊಸಮನಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರ ಸಮಿತಿ ರಚಿಸಿದ್ದು, ಆಗಸ್ಟ್‌ 11ರೊಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.



ರೀಲ್ಸ್‌ ಮಾಡಿದ್ದು ತೀವ್ರ ಟೀಕೆಗೆ ಗುರಿಯಾದ ನಂತರ, ಅಮಾನತುಗೊಂಡ ವಿದ್ಯಾರ್ಥಿಗಳು ಮತ್ತೊಂದು ವೀಡಿಯೊ ಮಾಡಿ ನರ್ಸ್‌ಗಳನ್ನು ಕ್ಷಮೆಯಾಚಿಸಿದರು. ಅಲ್ಲದೆ ಇದನ್ನು ತಮಾಷೆಗಾಗಿ ಮಾಡಿದ್ದಾಗಿ ಹೇಳಿ ವೀಡಿಯೊ ಮೂಲಕ ಕ್ಷಮೆ ಕೋರಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ