LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

26.85 ಲಕ್ಷ ವಾಟ್ಸಪ್ ಖಾತೆ ಬ್ಯಾನ್

ನವದೆಹಲಿ: ಭಾರತದಲ್ಲಿ 26.85 ಲಕ್ಷ ವಾಟ್ಸಾಪ್ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ಬಳಕೆದಾರರು ಫ್ಲ್ಯಾಗ್ ಮಾಡುವ ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿದೆ ಎಂದು ಕಂಪನಿ ತಿಳಿಸಿದೆ.



ಆಗಸ್ಟ್‌ನಲ್ಲಿ ನಿಷೇಧಿಸಲಾದ 23.28 ಲಕ್ಷ ಖಾತೆಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ 15 ಪ್ರತಿಶತ ಹೆಚ್ಚಾಗಿದೆ. 1 ಸೆಪ್ಟೆಂಬರ್, 2022 ಮತ್ತು 30 ಸೆಪ್ಟೆಂಬರ್, 2022 ರ ನಡುವೆ 26,85,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ.



ಇದರಲ್ಲಿ 8,72,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಬರುವ ಮೊದಲೇ ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ.



ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಕಾರಣದಿಂದ ತೀವ್ರ ಟೀಕೆಗೊಳಗಾಗಿದ್ದವು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಕಂಟೆಂಟ್ ತೆಗೆದು ಹಾಕುವಲ್ಲಿ ಮತ್ತು ಬಳಕೆದಾರರನ್ನು ನಿಷೇಧಿಸುವಲ್ಲಿ ನಿರಂಕುಶವಾಗಿ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ ಎಂದು ಬಹುದೊಡ್ಡ ಸಂಖ್ಯೆಯ ಬಳಕೆದಾರರು ಆರೋಪಿಸಿದ್ದಾರೆ.



ದೊಡ್ಡ ಟೆಕ್ ಕಂಪನಿಗಳ ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಕ್ರಿಯತೆ ಅಥವಾ ಟೇಕ್‌ಡೌನ್ ನಿರ್ಧಾರಗಳ ವಿರುದ್ಧ ಕುಂದುಕೊರತೆ ಮೇಲ್ಮನವಿ ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರವು ಕಳೆದ ವಾರ ನಿಯಮಗಳನ್ನು ಪ್ರಕಟಿಸಿತ್ತು. ಇತ್ತೀಚಿನ ವಾಟ್ಸ್​ಆಯಪ್ ವರದಿಯ ಪ್ರಕಾರ, ಅದು ಸೆಪ್ಟೆಂಬರ್‌ನಲ್ಲಿ 666 ದೂರುಗಳನ್ನು ಸ್ವೀಕರಿಸಿದೆ ಮತ್ತು 23 ದೂರುಗಳ ವಿಚಾರದಲ್ಲಿ ಮಾತ್ರ ಕ್ರಮ ಕೈಗೊಂಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ