LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

30% ಕಮಿಷನ್ ಬೇಡಿಕೆ; ಗ್ರಾಮ ಪಂಚಾಯತ್ ಸದಸ್ಯೆ ರಾಜೀನಾಮೆ

ರಾಯಬಾಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕಮಿಷನ್ ಪ್ರಕರಣದಿಂದ ರಾಷ್ಟ್ರ ಮಟ್ಟದಲ್ಲಿ '40% ಕಮಿಷನ್' ಸರಕಾರ ಎಂದು ಕುಖ್ಯಾತಿಗೊಳಗಾಗಿರುವ ಬಿಜೆಪಿ ಈಗ ಅಂತಹದೇ ಮತ್ತೊಂದು ಪ್ರಕರಣದ ಆರೋಪಕ್ಕೆ ಗುರಿಯಾಗಿದೆ.



ರಾಯಬಾಗ ತಾಲೂಕಿನ ಮೇಖಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಮೀಷನ್ ಬೇಡಿಕೆ ಇಟ್ಟಿರುತ್ತಾರೆ ಎಂದು ಆರೋಪಿಸಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಮೇಖಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ. ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಗ್ರಾ.ಪಂ. ಯೋಜನೆಯಡಿ ಬರುವ ೧೪ನೇ, ೧೫ನೇ ಹಾಗೂ ಉದ್ಯೋಗ ಖಾತ್ರಿ ಯೋಜನೆ ಅನುದಾನಗಳಿಗೆ ಅನುಮತಿ ಪಡೆಯಲು ಪ್ರತಿ ಶತ ಹಣವನ್ನು ತಾ.ಪಂ. ಮತ್ತು ಜಿ.ಪಂ.ಯರಿಗೆ ನೀಡಬೇಕೆಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೇಳುತ್ತಾರೆ ಎಂದು ಗಂಭೀರ  ಆರೋಪ ಮಾಡಿದ್ದಾರೆ.



ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಿಸುವ ಕಾಮಗಾರಿ ಕಾರ‍್ಯಗಳಿಗೆ ಪಿಡಿಒ ಅವರಿಗೆ ಶೇ 10% ಇಂಜನೀಯರ ಅವರಿಗೆ ಶೇ10% ತಾ.ಪಂ. ಎಡಿ ಮತ್ತು ಇಒ ಅವರಿಗೆ ಶೇ 7% ಹಾಗೂ ಟೆಕ್ನಿಕಲ್‌ದವರಿಗೆ ಪ್ರತಿಶತ ಶೇ 3% ಹೀಗೆ ಒಟ್ಟು ಪ್ರತಿಶತ ಶೇ 30 % ರಷ್ಟು ನೀಡಬೇಕೆಂದು ಅಧಿಕಾರಿ ಕೇಳುತ್ತಾರೆಂದು ಆರೋಪಿಸಿ, ತಮಗೆ ಹಣ ನೀಡಲು ಆಗದೇ ಇರುವುದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.



ಈ ಪ್ರಕರಣ ಸಂಬಂಧಿಸಿದಂತೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಪಿಡಿಒ ಮಂಜುನಾಥ ದಳವಾಯಿ ಅವರು, ಈ ಪ್ರಕರಣ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಉತ್ತರಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ