LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತೇಗೂರು ಬಳಿ ಕಾರ್ - ಲಾರಿ ಅಪಘಾತ; 5 ಸಾವು

ಕಿತ್ತೂರು : ಮುಂದೆ ಹೊರಟಿದ್ದ ಲಾರಿಗೆ ಹಿಂದಿನಿಂದ ರಭಸವಾಗಿ ಕಾರ್ ಡಿಕ್ಕಿ ಹೊಡೆದು ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲೇ ಅಸುನೀಗಿದ ಘಟನೆ ಕಿತ್ತೂರು ತಾಲೂಕಿನ ತೇಗೂರು ಗ್ರಾಮದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುರುವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ.



ಮೃತರನ್ನು ಕಿತ್ತೂರ ತಾಲ್ಲೂಕಿನ ಅವರಾದಿ ಗ್ರಾಮದ ಮಹಾಂತೇಶ ಬಸಪ್ಪ ಮುದ್ದೋಜಿ, 29, ನಾಗಪ್ಪ ಈರಪ್ಪ ಮುದ್ದೋಜಿ 40, ಮತ್ತು ನೀಚಣಿಕಿ ಗ್ರಾಮದ

ಬಸವರಾಜ ಶಿವಪುತ್ರಪ್ಪ ನರಗುಂದ, 35, ಶ್ರೀಕುಮಾರ ನರಗುಂದ, 5, ಮತ್ತು ಹೆಬ್ಬಳ್ಳಿಯ ಈರಣ್ಣ ಗುರುಸಿದ್ದಪ್ಪ ರಾಮಮನಗೌಡರ 35 ಎಂದು ಗುರುತ್ತಿಸಲಾಗಿದೆ.



ಈರಣ್ಣ ರಾಮನಗೌಡರ ರಸ್ತೆ ಬದಿಯಿಂದ ಹೊರಟಿದ್ದರು. ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರ್ ಈರಣ್ಣ ಅವರಿಗೂ ಹಾಯ್ದು ಅವರೂ ಸ್ಥಳದಲ್ಲೇ ಸಾವಿಗೀಡಾದರು.



ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಗಾಯಗೊಂಡಿರುವ ಶಿವಕುಮಾರ ಬಸವರಾಜ ನರಗುಂದ, ಮಡಿವಾಳಪ್ಪ ರಾಜು ಅಳ್ನಾವರ ಅವರನ್ನು ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ಮತ್ತು ಪ್ರಕಾಶ ಗೌಡ ಶಂಕರಗೌಡ ಪಾಟೀಲ ಮತ್ತು ಮಂಜುನಾಥ ಮಹಾಂತೇಶ ಮುಧೋಳ ಅವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೂ ಸೇರಿಸಲಾಗಿದೆ.



ಗರಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ