LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಂಚಾರ ದಂಡ ಪಾವತಿಗೆ ಶೇಕಡಾ 50 ರಷ್ಟು ರಿಯಾಯಿತಿ

ಬೆಳಗಾವಿ:ನಗರ ಪೊಲೀಸ್ ಆಯುಕ್ತರ ಕಚೇರಿ ಸಂಚಾರ ದಂಡ ಪಾವತಿಗೆ 50% ರಿಯಾಯತಿ ನೀಡಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.



ದಿನಾಂಕ: 20.11.2025 ರ ಆದೇಶದ ಮೂಲಕ, ಪೊಲೀಸ್ ಇಲಾಖೆಯಿಂದ ಟ್ರಾಫಿಕ್ ಇ-ಚಲನ್ ಅಡಿಯಲ್ಲಿ ನೋಂದಾಯಿಸಲಾದ ಹಾಗೂ ಪಾವತಿಸದೇ ಬಾಕಿ ಇರುವ ಪ್ರಕರಣಗಳಲ್ಲಿ ದಂಡದ ಮೇಲೆ 50% ರಿಯಾಯಿತಿಯನ್ನು ನೀಡುವ ಆದೇಶವನ್ನು ಸರಕಾರ ಹೊರಡಿಸಿದೆ. ಈ ಆದೇಶವು 21.11.2025 ರಿಂದ 12.12.2025 ರವರೆಗೆ ಜಾರಿಯಲ್ಲಿರುತ್ತದೆ. ಕಾರಣ ಬೆಳಗಾವಿ ನಗರದ ಸಾರ್ವಜನಿಕರು ನಿಮ್ಮ ವಾಹನದ ಮೇಲೆ ಬಾಕಿ ಇರುವ ದಂಡದ ಮೊತ್ತದ 50% ದಂಡವನ್ನು ಪಾವತಿಸುವ ಮೂಲಕ ಇತ್ಯರ್ಥಪಡಿಸಬಹುದು.



ಬಾಕಿ ಇರುವ ದಂಡದ ಮೊತ್ತ ಪಾವತಿಸುವ ಸ್ಥಳ 1. ನಿಮ್ಮ ಹತ್ತಿರದ ಸಂಚಾರ ಪೊಲೀಸ್ ಠಾಣೆಯಲ್ಲಿ ಬಾಕಿ ದಂಡವನ್ನು ಪಾವತಿಸಬಹುದು.

2. ಪೊಲೀಸ್ ಆಯುಕ್ತರ ಕಛೇರಿ, (ರಿಶೆಷ್ಠನ್ ಡೆಸ್ಕ್ ನಲ್ಲಿರುವ ಪೊಲೀಸ್ ಅಧಿಕಾರಿಗಳ ಬಳಿಗೆ) ಪಾವತಿ ಮಾಡಬಹುದು.

3. ಕರ್ನಾಟಕ ಒನ್ / ಬೆಳಗಾವಿ ಒನ್ ಕೇಂದ್ರಗಳಲ್ಲಿ ಪಾವತಿ ಮಾಡಬಹುದು.



ಕೇಂದ್ರಗಳ ವಿಳಾಸ :



1. ಅಶೋಕ ನಗರ,



2. ದೂರದರ್ಶನ ನಗರ (ಟಿ.ವಿ ಸೆಂಟರ್)



3. ರಿಸಾಲ್ದಾರಗಲ್ಲಿ ಗಲ್ಲಿ, (ಹಳೇ ಕಾರ್ಪೋರೇಶನ್ ಬಿಲ್ಡಿಂಗ್)



4. ಗೋವಾವೇಸ್



4. ಇದರೊಂದಿಗೆ ಸಂಚಾರ ವಿಭಾಗದ ಇ-ಚಲನ್ ಮಸೀನ್ ಹೊಂದಿರುವ ಎಎಸ್‌ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಿ ರಸೀದಿ ಪಡೆದುಕೊಳ್ಳಬಹುದಾಗಿದೆ.



ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತರು ಕೋರಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ