LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

21 ದಿನಗಳ ಶಿಶುವಿನ ಹೊಟ್ಟೆಯಲ್ಲಿ 8 ಭ್ರೂಣ ಪತ್ತೆ

ರಾಂಚಿ : 21 ದಿನಗಳ ಹಸುಗೂಸಿನ ಹೊಟ್ಟೆಯಲ್ಲಿ 8 ಭ್ರೂಣಗಳು ಪತ್ತೆಯಾದ ವಿಚಿತ್ರ ಘಟನೆ ರಾಂಚಿಯಲ್ಲಿ ಅಪರೂಪದ ಪ್ರಕರಣವೊಂದು ಬೆಳಕಿಗೆ ಬಂದಿದೆ.



ಶಸ್ತ್ರಚಿಕಿತ್ಸೆ ಮೂಲಕ ಭ್ರೂಣಗಳನ್ನು ಹೊರತೆಗೆಯಲಾಗಿದೆ. ಭ್ರೂಣಗಳ ಗಾತ್ರವು ಮೂರು ಸೆಂಟಿ ಮೀಟರ್‌ಗಳಿಂದ ಐದು ಸೆಂಟಿಮೀಟರ್‌ಗಳವರೆಗೆ ಇತ್ತು. ಹೊಟ್ಟೆಯಲ್ಲಿನ ಚೀಲದೊಳಗೆ ಭ್ರೂಣಗಳಿದ್ದವು ಎಂದು ಶಸ್ತ್ರಚಿಕಿತ್ಸೆ ನಡೆಸಿದ ಡಾ.ಎಂ.ಡಿ.ಇಮ್ರಾನ್ ತಿಳಿಸಿದ್ದಾರೆ.



ವೈದ್ಯಕೀಯ ಪರಿಭಾಷೆಯಲ್ಲಿ, ಇದನ್ನು ಫೋಯೆಟಸ್‌-ಇನ್-ಫೆಟು ಎಂದು ಕರೆಯಲಾಗುತ್ತದೆ. ಇದು ಅಪರೂಪದ ಘಟಕವಾಗಿದ್ದು, ಅದರಲ್ಲಿ ಒಂದು ದೋಷಪೂರಿತ ಕಶೇರುಕ ಭ್ರೂಣವು ಅವಳಿ ದೇಹದೊಳಗೆ ಸುತ್ತುವರಿಯಲ್ಪಟ್ಟಿದೆ.



ಇದುವರೆಗೆ ಬೆಳಕಿಗೆ ಬಂದ ಪ್ರಕರಣಗಳಲ್ಲಿ ಕೇವಲ ಒಂದು ಭ್ರೂಣವಿತ್ತು. ಆದರೆ ಶಿಶುವಿನ ಹೊಟ್ಟೆಯಲ್ಲಿ ಎಂಟು ಭ್ರೂಣ ಪತ್ತೆಯಾಗಿರುವುದು ಇದೇ ಮೊದಲು. ಐದು ಲಕ್ಷ ಮಂದಿಯ ಪೈಕಿ ಒಬ್ಬರಲ್ಲಿ ಮಾತ್ರ ಇಂತಹ ಪ್ರಕರಣ ಸಂಭವಿಸುತ್ತದೆ ಅಂತಾ ಡಾ. ಇಮ್ರಾನ್‌ ಮಾಹಿತಿ ನೀಡಿದ್ದಾರೆ.



ನವೆಂಬರ್ 1ರಂದು ಶಿಶುವನ್ನು ಪರೀಕ್ಷಿಸಿದಾಗ ಒಂದರ ನಂತರ ಒಂದರಂತೆ ಎಂಟು ಭ್ರೂಣಗಳು ಪತ್ತೆಯಾಗಿವೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸದ್ಯ ಮಗು ಆರೋಗ್ಯವಾಗಿದೆ. ಮಗು ಸದ್ಯ ತೀವ್ರ ನಿಗಾ ಘಟಕದಲ್ಲಿದ್ದು, ಇನ್ನೊಂದು ವಾರದಲ್ಲಿ ಡಿಸ್ಚಾರ್ಜ್‌ ಆಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ