LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾರು ಅಪಘಾತ 

ಹುಕ್ಕೇರಿ : ಸಚಿವ ಉಮೇಶ ಕತ್ತಿ ನಿಧನದಿಂದ ಅಘಾತಗೊಂಡಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಕಾರಿಗೆ ಎದುರಿಗೆ ಬಂದ ಕಾರೊಂದಕ್ಕೆ ಢಿಕ್ಕಿ ಹೊಡೆದು ಅದೃಷ್ಟವಷಾತ್ ಕಂದಕದಲ್ಲಿ ಬೀಳದೇ ರಸ್ತೆ ಬದಿಯ ಸುರಕ್ಷತಾ ಕಟ್ಟೆಗೆ ಢಿಕ್ಕಿ ಹೊಡೆದು ನಿಂತಿತು. ಘಟನೆ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.



ಕತ್ತಿ ಕುಟುಂಬದವರಿಗೆ ಸಾಂತ್ವನ ಹೇಳಲು ಉಪ್ಪಾರ ಸಮಾಜದ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ನಿಂಗಪ್ಪ ಮಾಳ್ಯಾಗೋಳ ಮತ್ತು ಸುನಿಲ ಕಾರಿನಲ್ಲಿ ಹೊರಟಿದ್ದಾಗ ಬೆಲ್ಲದ ಬಾಗೇವಾಡಿ ಸಮಿಪದ ಕೊರವಂಜಿ ನಗರದ ಬಳಿ ಮಹಿಂದ್ರಾ ಸ್ಕಾರ್ಪಿಯೋ ಕಾರ್ ಡಿಕ್ಕಿ ಹೊಡೆಸಿ ಚಾಲಕ ಪರಾರಿಯಾಗಿದ್ದಾನೆ.



ಅಪಘಾತ ಸಂಭವಿಸಿದ ಸ್ಥಳದ ಬದಿ ನೀರಾವರಿ ಇಲಾಖೆಯ 30 ಅಡಿ ಆಳದ ಕಾಲುವೆಯಿದೆ. ರಸ್ತೆ ಬದಿಯ ಸುರಕ್ಷತಾ ಕಟ್ಟೆ ಇಲ್ಲದಿದ್ದರೆ ದೊಡ್ಡ ಅನಾಹುತವಾಗುವ ಸಾಧ್ಯತೆಯಿತ್ತು.



ಕಾರಿನಲ್ಲಿದ್ದವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮಿಪದ ಘಟಪ್ರಭಾ ಕೆಎಚ್ಐ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು