LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳಗಾವಿ : ರಮೇಶ್ ಕತ್ತಿ ಅವರು ಗೆದ್ದಿರುವ ಬೆನ್ನಲ್ಲೇ ಅವರಿಗೆ ಈಗ ಸಂಕಟ ಎದುರಾಗಿದೆ. ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚಿಕ್ಕೋಡಿಯ ಮಾಜಿ ಸಂಸದರು ಮತ್ತು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು ಆಗಿರುವ ರಮೇಶ ಕತ್ತಿ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.



ರಮೇಶ ಕತ್ತಿ ಅವರನ್ನು ಈ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ರವಿವಾರ ರಾತ್ರಿ ವಾಲ್ಮೀಕಿ ಸಮಾಜದವರು ಪ್ರತಿಭಟನೆ ನಡೆಸಿದರು. ಈ ಕೂಡಲೇ ರಮೇಶ್ ಕತ್ತಿ ಅವರನ್ನು ಬಂಧಿಸದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.



ರವಿವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು. ಈ ಸಂದರ್ಭದಲ್ಲಿ ಅವರು ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದರು. ಜಾರಕಿಹೊಳಿ ಸಹೋದರರನ್ನು ಟೀಕಿಸುವ ಸಂದರ್ಭದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.



ಈ ಬಗ್ಗೆ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಇದನ್ನೇ ಆಧಾರವಾಗಿಟ್ಟುಕೊಂಡು ಸಮಾಜದ ಮುಖಂಡ ರಾಜಶೇಖರ ತಳವಾರ ಅವರು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸೋಮವಾರ (ಅಕ್ಟೋಬರ 20 ರಂದು) ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.



ನನ್ನ ಹೇಳಿಕೆ ತಿರುಚಲಾಗಿದೆ : ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದ ನಂತರ ಅಭಿಮಾನಿಗಳು ಡಾಲ್ಫಿ ಸಂಗೀತ ಹಚ್ಚಿ ಮೆರವಣಿಗೆಗೆ ಒತ್ತಾಯ ಮಾಡಿದ್ದಾರೆ. ಆಗ ನಾನು ಬ್ಯಾಡರೋ(ಬೇಡ) ಎಂದೆ. ಈ ಹೇಳಿಕೆ ತಿರುಚಿ ಜಾತಿ ನಿಂದನೆ ಎಂದು ವಿಡಿಯೋ ಮಾಡಿದ್ದಾರೆ. ನನ್ನ ಗೆಲುವು ಸಹಿಸಲಾಗದವರು ಉದ್ದೇಶಪೂರ್ವಕವಾಗಿ ವಾಲ್ಮೀಕಿ ಸಮುದಾಯದ ವಿರೋಧಿ ಎಂಬಂತೆ ನನ್ನನ್ನು ಬಿಂಬಿಸಿದ್ದಾರೆ. ನಾನು ಯಾರನ್ನು ಉದ್ದೇಶಿಸಿ ಮಾತನಾಡಿಲ್ಲ. ಇಷ್ಟಾಗಿಯೂ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುವೆ ಎಂದು ರಮೆಶ ಕತ್ತಿ ಅವರು ಪ್ರತಿಕ್ರಿಯಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು