LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಗುವಿನ ಹುಟ್ಟುಹಬ್ಬ ಆಚರಿಸಿ, ಜೋಳಿಗೆಗೆ ನೇಣು ಹಾಕಿಕೊಂಡು ರೈತನ ಆತ್ಮಹತ್ಯೆ

ಬೆಳಗಾವಿ : ಸತತ ಮೂರನೇ ವರುಷವೂ ಬೆಳೆದ ಬೆಳೆ ಅತಿವೃಷ್ಟಿಯಿಂದ ಹಾಳಾದ ಹಿನ್ನಲೆಯಲ್ಲಿ ಕೃಷಿಗಾಗಿ ಮಾಡಿದ ಸಾಲ ತೀರಿಸಲು ಮತ್ತು ಮನೆ ನಿರ್ವಹಿಸಲು ಸಾಧ್ಯವಾಗದ್ದಕ್ಕೆ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ರೈತ ಬೆಳಗಾವಿಯ ತಮ್ಮ ಬಾಡಿಗೆ ಮನೆಯಲ್ಲಿ ಮಂಗಳವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



34 ವರ್ಷದ ಕೃಷಿಕ ರಾಜಶೇಖರ ಫಕೀರಪ್ಪ ಬೋಳೆತ್ತಿನ ಎಂಬುವರು ಮೃತ ದುರ್ದೈವಿ. ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯ ವಿನಾಯಕ ನಗರದಲ್ಲಿ ಬಾಡಿಗೆ ಮನೆ ಪಡೆದು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.







ಸೋಮವಾರ ತಮ್ಮ ಎರಡನೇ ಮಗುವಿನ ಮೊದಲನೇ ಹುಟ್ಟುಹಬ್ಬ ಆಚರಿಸಿ ಮಂಗಳವಾರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಒತ್ತಾಯ ಪೂರ್ವಕವಾಗಿ ಹೊಸೂರಿನಲ್ಲಿರುವ ತಮ್ಮ ತಂದೆಯ ಮನೆಗೆ ಕಳುಹಿಸಿ ಮಗುವಿನ ಜೋಳಿಗೆ ಬಟ್ಟೆ ಬಳಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



ಕೃಷಿಗೆಂದು ರಾಜಶೇಖರ ತಮ್ಮ ತಂದೆಯ ಹೆಸರಿನಲ್ಲಿದ್ದ ಹೊಲದ ಮೇಲೆ ಬ್ಯಾಂಕ್ ಮತ್ತು ಕೈಗಡ ಸಾಲ ಪಡೆದಿದ್ದರು. ಅಲ್ಲದೇ ಹೊಲದ ಸ್ವಲ್ಪ ಭಾಗವನ್ನು ಇತರ ರೈತರಿಗೆ ಭೋಗ್ಯದ ಆಧಾರದ ಮೇಲೆ ನೀಡಿದ್ದರು. 2019ರಿಂದ ಬೆಳೆದ ಬೆಳೆ ಅತಿವೃಷ್ಟಿಯಿಂದ ಹಾಳಾಗಿತ್ತು. ಈ ವರ್ಷವೂ ಅವರು ಬೆಳೆದಿದ್ದ ಸೋಯಾಬಿನ್ ವಿಪರೀತ ಅಕಾಲಿಕ ಮಳೆಯಿಂದ ಕೈಗೆ ಬಂದಿರಲಿಲ್ಲ.



ಈ ಕಾರಣಗಳಿಂದ ಮತ್ತು ಮಾಡಿದ ಸಾಲ ತೀರಿಸುವದು, ಕುಟುಂಬ ನಿರ್ವಹಿಸುವದು ಸಾಧ್ಯವಾಗದು ಎಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಕ್ಯಾಂಪ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ