LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಪಘಾತದಲ್ಲಿ ನಿಧನಳಾದ ಮಗಳ ಮೂರ್ತಿ ನಿರ್ಮಿಸಿ ಪೂಜೆ ಸಲ್ಲಿಸುತ್ತಿರುವ ತಂದೆ

ವಿಜಯವಾಡ: ವಿಧಿಯ ಆಟದಲ್ಲಿ ಮಗಳನ್ನು ಕಳೆದುಕೊಂಡ ತಂದೆಯೊಬ್ಬ ಬಳಿಕ ಆಕೆಯನ್ನು ಮರೆಯಲಾಗದೇ ಮಗಳ ಮೂರ್ತಿಯನ್ನು ಸ್ಥಾಪಿಸಿ, ದೇವಸ್ಥಾನ ನಿರ್ಮಿಸಿ ನಿತ್ಯವೂ ಪೂಜೆ ಮಾಡುತ್ತಿರುವ ಅಪರೂಪದ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.



ವೆಂಕಟಾಚಲಂ ಮಂಡಲದ ಕಾಕೂಟೂರಿನ ಚೆಂಚಯ್ಯ ಮತ್ತು ಲಕ್ಷ್ಮಮ್ಮ ದಂಪತಿಗೆ ಐವರು ಮಕ್ಕಳು. ಅದರಲ್ಲಿ ನಾಲ್ಕನೇ ಮಗಳ ಹೆಸರು ಸುಬ್ಬಲಕ್ಷ್ಮಮ್ಮ. ಈಕೆ ಹುಟ್ಟಿದ ಮೇಲೆ ಕುಟುಂಬ ಆರ್ಥಿಕವಾಗಿಯೂ ಸದೃಢವಾಯಿತು. ಹೀಗಾಗಿ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಅಲ್ಲದೇ ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ಸಿಕ್ಕಾಗ ಅವರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿತ್ತು.



ಆದರೆ, ಆ ಸಂತೋಷ ಹೆಚ್ಚು ದಿನ ಇರಲಿಲ್ಲ. 2011ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಬ್ಬಲಕ್ಷ್ಮಮ್ಮ ಪ್ರಾಣ ಕಳೆದುಕೊಂಡಿದ್ದಳು. ಆಕೆಯ ಸಾವಿನಿಂದಾಗಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿತ್ತು.



ಒಂದು ದಿನ ತಂದೆ ಚೆಂಚಯ್ಯಯ ಕನಸಿನಲ್ಲಿ ಮಗಳು ಸುಬ್ಬಲಕ್ಷ್ಮಮ್ಮ ಕಾಣಿಸಿಕೊಂಡಳಂತೆ. ಆಕೆಯ ಬಯಕೆಯಂತೆ ದೇವಸ್ಥಾನ ಕಟ್ಟಿದ್ದಾಗಿ ಚೆಂಚಯ್ಯ ಹೇಳಿದ್ದಾನೆ.



ಮಗಳ ಮೂರ್ತಿಯನ್ನು ಸ್ಥಾಪಿಸಿ, ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಅಲ್ಲದೇ ಪ್ರತಿ ವರ್ಷ ಮಗಳ ಹೆಸರಿನಲ್ಲಿ ಜಾತ್ರೆಯನ್ನು ನಡೆಸಿಕೊಂಡು ಬರುತ್ತಿದ್ದಾನೆ. ಮಗಳಿಗಾಗಿ ದೇವಸ್ಥಾನ ನಿರ್ಮಿಸಿದ ಚೆಂಚಯ್ಯನನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ