LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಲೆಬಾಳುವ ವಸ್ತು ಸಿಗಲಿಲ್ಲವೆಂದು ಕಳ್ಳರ ಗುಂಪಿನಿಂದ ಗಂಡನೆದುರು ಪತ್ನಿ ಮೇಲೆ ರೇಪ್

ಜೈಪುರ, ೧೪- ಕಳ್ಳತನಕ್ಕೆಂದು ಮನೆಗೆ ನುಗ್ಗಿದ ಕಳ್ಳರ ಗುಂಪು ಮನೆಯಲ್ಲಿ ಬೆಲೆಬಾಳುವ ವಸ್ತುಗಳು ಸಿಗಲಿಲ್ಲವೆಂದು ಗಂಡನ ಎದುರು ಪತ್ನಿಯನ್ನು ಸಾಮೂಹಿಕ ಬಲಾತ್ಕಾರ ಮಾಡಿದೆ..



ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಪತಿಯ ಎದುರೇ ನಾಲ್ವರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



ಬುಧವಾರ ನಾಲ್ವರು ದರೋಡೆ ಮಾಡುವ ಉದ್ದೇಶದಿಂದ ದಂಪತಿಯ ಮನೆಗೆ ನುಗ್ಗಿದ್ದರು. ಶುಕ್ರವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಮುನ್ನ ದಂಪತಿಗಳು ಆಘಾತಕ್ಕೊಳಗಾಗಿದ್ದು, ಗುರುವಾರ ಮನೆಯೊಳಗೇ ಉಳಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಶನಿವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ಕನೆಯವನನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.



ಮಹಿಳೆಯ ಪತಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ದಂಪತಿ ಮಲಗಲು ತಯಾರಿ ನಡೆಸುತ್ತಿದ್ದಾಗ ನಾಲ್ವರು ಮನೆಗೆ ನುಗ್ಗಿ ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಈ ವೇಳೆ ಮನೆಯೊಡೆಯನಿಂದ ಕಳ್ಳರು 1,400 ರೂ. ಕಿತ್ತುಕೊಂಡು ಹೆಚ್ಚಿನ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಒತ್ತಾಯಿಸಿದರು.



ಆದರೆ ಕೆಲವು ಬೆಳ್ಳಿ ಆಭರಣ ಹೊರತುಪಡಿಸಿ ದಂಪತಿಗಳ ಬಳಿ ಹೆಚ್ಚೇನೂ ಇರಲಿಲ್ಲ. ದರೋಡೆಕೋರರಿಗೆ ಬೇರೇನೂ ಸಿಗದಿದ್ದಾಗ ಅವರು ಮಹಿಳೆಯನ್ನು ಆಕೆಯ ಗಂಡನ ಮುಂದೆ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ಹೇಳಿದರು.



ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ವಿವಿಧ ಠಾಣೆಗಳ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ. ಈ ಪೈಕಿ ಮೂವರನ್ನು ಶನಿವಾರ ಬಂಧಿಸಲಾಗಿದೆ. ನಮ್ಮ ತಂಡಗಳು ನಾಲ್ಕನೇ ಆರೋಪಿಯ ಬೆನ್ನತ್ತಿದ್ದು ಆತನನ್ನೂ ಹಿಡಿಯಲಾಗುವುದು ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ