LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಎರಡು ಮರಿಗಳೊಂದಿಗಿದ್ದ ಚಿರತೆ ಪತ್ತೆ

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಪರಿಸರದಲ್ಲಿ ಅರಣ್ಯ ಇಲಾಖೆ ಅಳವಡಿಸಿರುವ ಸಿಸಿ ಕೆಮೆರಾದಲ್ಲಿ ಎರಡು ಮರಿಗಳೊಂದಿಗೆ ಚಿರತೆಯ ಚಿರತೆಗಳ ಚಲನವಲನ ಪತ್ತೆಯಾಗಿದೆ.



ನಾಗರದಿನ್ನಿ ಗ್ರಾಮದ ಸುರೇಶ ಕುಬಕಡ್ಡಿ ಎಂಬ ರೈತರು ಮಹದೇವ ಕೋಲಕಾರ ಎಂಬ ರೈತರ ಜಮೀನಿನಲ್ಲಿ ಚಿರತೆ ಹಾಗೂ ಚಿರತೆ ಮರಿಗಳು ಇರುವುದನ್ನು ನೋಡಿದ್ದರು. ಚಿರತೆಯನ್ನು ಕಂಡಿದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಲೇ ಸ್ಥಳಕ್ಕೆ ಆಗಮಿಸಿದ್ದ ಅಧಿಕಾರಿಗಳು ವನ್ಯ ಜೀವಿಗಳ ಚಲನವಲನ ಅರಿಯಲು ಸಿ.ಸಿ. ಕ್ಯಾಮೆರಾ ಅಳವಡಿಸಿದ್ದಾರೆ. ಅದರಂತೆ ಜಮೀನಿನಲ್ಲಿ ಮರಿಗಳೊಂದಿಗೆ ಚಿರತೆ ಪತ್ತೆಯಾಗಿದೆ.



ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕೊಲ್ಹಾರ ತಹಶೀಲ್ದಾರ, ಎಸ್.ಎಸ್. ನಾಯಕಲಮಠ, ಅರಣ್ಯ ಅಧಿಕಾರಿ ಬಸವರಾಜ ಕೊಣ್ಣೂರ ಅವರು, ಜನರು ಸುರಕ್ಷಿತವಾಗಿ ಓಡಾಡುವಂತೆ ಹಾಗೂ ಒಬ್ಬೊಬ್ಬರೇ ಓಡಾಡುವ ಬದಲು ಒಬ್ಬರಿಗಿಂತ ಹೆಚ್ಚು ಜನರು ಕೂಡಿ ಓಡಾಡುವಂತೆ ಸಲಹೆ ನೀಡಿದ್ದಾರೆ.



ತಾವು ಇರಿಸಿರುವ ಸಿ.ಸಿ. ಕ್ಯಾಮೆರಾದಲ್ಲಿ ಚಿರತೆ ಚಲನವಲನ ಪತ್ತೆಯಾಗಿದ್ದು, ಶೀಘ್ರವೇ ಸೆರೆ ಹಿಡಿಯುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ