LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗೋಮಾಂಸ ಸಾಗಾಟ ಆರೋಪಿಸಿ ಐನಾಪುರದಲ್ಲಿ ಲಾರಿಗೆ ಬೆಂಕಿ: 7 ಜನ ಪೊಲೀಸ್ ವಶಕ್ಕೆ

ಕಾಗವಾಡ : ರಾಯಬಾಗ ತಾಲೂಕಿನ ಕುಡಚಿಯಿಂದ ಹೈದರಾಬಾದಿಗೆ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಲಾರಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದಲ್ಲಿ ಸೋಮವಾರ ರಾತ್ರಿ ನಡೆದಿದೆ.



ಐನಾಪುರದ ಉಗಾರ ರಸ್ತೆಯ ಶ್ರೀ ಸಿದ್ದೇಶ್ವರ ಗುಡಿ ಬಳಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಲಾರಿಯನ್ನು ಕೆಲವರು ಅಡ್ಡಗಟ್ಟಿದ್ದಾರೆ. ಚಾಲಕನನ್ನು ವಿಚಾರಿಸಿ ಪರಿಶೀಲಿಸಿದಾಗ ದನದ ಮಾಂಸ ಇರುವುದು ಕಂಡುಬಂದಿದೆ ಎನ್ನಲಾಗಿದೆ. ಇದರಿಂದ ಕಿಡಗೇಡಿಗಳು ಲಾರಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಆಗಮಿಸುವಷ್ಟರಲ್ಲಿ ಲಾರಿಯು ಬೆಂಕಿಗೆ ಆಹುತಿಯಾಗಿದೆ.



ಲಾರಿಯಲ್ಲಿ ಸುಮಾರು ಐದು ಟನ್ನಿಗೆ ಹೆಚ್ಚು ಮಾಂಸ ಇತ್ತು ಎನ್ನಲಾಗಿದೆ. ಉಗಾರ ಸಕ್ಕರೆ ಕಾರ್ಖಾನೆ ಮತ್ತು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.



ಎರಡು ಪ್ರಕರಣ ದಾಖಲು :



ಕಾಗವಾಡ ತಾಲೂಕು ಐನಾಪುರದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಕಾಗವಾಡದಲ್ಲಿ ಎರಡು ಪ್ರಕರಣ ದಾಖಲಾಗಿವೆ.



ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟ ಭೀಮಶಂಕರ ಗುಳೇದ ಅವರು, ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿ ಹಿಂಸೆ ಕಾಯ್ದೆ ಅಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.



ಲಾರಿಗೆ ಬೆಂಕಿ ಹಚ್ಚಿದ್ದು ದರೋಡೆ ಮತ್ತು ಅಟ್ರಾಸಿಟಿ ಪ್ರಕರಣದಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ತನಿಖೆ ತೀವ್ರಗೊಳಿಸಲಾಗಿದ್ದು ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ