LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿವಾಹ ಭೋಜನದಿಂದ ಅಸ್ವಸ್ಥ ವ್ಯಕ್ತಿಯ ದೃಷ್ಟಿ ನಾಶ

ಚಿಕ್ಕೋಡಿ, ೧- ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿ ಕಳೆದ ಮಂಗಳವಾರ ಜರುಗಿದ ವಿವಾಹದ ಭೋಜನ ಮಾಡಿ ಅಸ್ವಸ್ಥರಾಗಿದವರಲ್ಲಿ ಒಬ್ಬರು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ.



ಪಟೇಲ ಎಂಬವರ ಕುಟುಂಬದಲ್ಲಿ ಆಮಂತ್ರಿತರಿಗೆ ರಾತ್ರಿ ಮಾಂಸಹಾರಿ ಭೋಜನ ನೀಡಲಾಗಿತ್ತು. ಇದನ್ನು ಸೇವಿಸಿದ್ದ ಮಕ್ಕಳು ಮಹಿಳೆಯರೂ ಸೇರಿದಂತೆ ನೂರಾರು ಜನ ವಾಂತಿ, ಭೇದಿಯಿಂದ ಬಳಲಿ ಚಿಕ್ಕೋಡಿ, ಹಿರೇಕೋಡಿ ಮತ್ತು ಮಹಾರಾಷ್ಟ್ರದ ಮಿರಜ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.



ಆದರೆ 32 ವರುಷದ ಬಾಬಾಸಾಹೇಬ ಬೇಗ್ ಎಂಬವರು ವಾಂತಿ ಬೇಧಿಗೊಳಗಾಗಿ ತೀವ್ರ ನಿತ್ರಾಣಗೊಂಡಿದ್ದರು. ಚಿಕ್ಕೋಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಿರಜ್ ಆಸ್ಪತ್ರೆಗೆ ದಾಖಲಾಗಲು ಸೂಚಿಸಲಾಗಿತ್ತು. ಆದರೆ ಅವರು ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಗುರುವಾರದಿಂದ ಅವರಿಗೆ ಕಣ್ಣು ಕಾಣುತ್ತಿಲ್ಲ.



ಜಿಲ್ಲಾ ಆಸ್ಪತ್ರೆಯಲ್ಲಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ವಾಂತಿ ಯಿಂದ ಅವರು ತೀವ್ರವಾಗಿ ನಿತ್ರಾಣಗೊಂಡಿರುವುದರಿಂದ ಅವರ ರಕ್ತದಲ್ಲಿ ನೀರಿನ ಅಂಶ ಕಡಿಮೆಯಾಗಿ ಮಿದುಳಿಗೆ ಎಷ್ಟು ಬೇಕೋ ಅಷ್ಟು ಸರಬರಾಜಾಗುತ್ತಿಲ್ಲ. ಹೀಗಾಗಿ ಅವರ ದೃಷ್ಟಿಗೆ ತೊಂದರೆಯಾಗಿದೆ. ಎಂಆರ್ ಆಯ್ ಸ್ಕ್ಯಾನ್ ಮಾಡಿದ ನಂತರ ದೃಷ್ಟಿಹರಣಕ್ಕೆ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು