LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರವಾಸಕ್ಕೆ ಕರೆದೊಯ್ದು ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ

ಮೀರತ, ೧೨- ಪ್ರಾಂಶುಪಾಲ ಅತ್ಯಾಚಾರ ಎಸಗಿದ ಆರೋಪ ಉತ್ತರಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ.



ಪ್ರಾಂಶುಪಾಲರು ನವೆಂಬರ್ 23 ರಂದು ಶಾಲೆಯ ಒಂಭತ್ತು ವಿದ್ಯಾರ್ಥಿನಿಯರನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು ಮತ್ತು ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು.



ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿನಿಯರು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ -17 ವರ್ಷದ ಬಾಲಕಿಯೊಂದಿಗೆ ಉಳಿದುಕೊಂಡಿದ್ದರು ಎನ್ನಲಾಗಿದೆ.



ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



ಪ್ರವಾಸದಿಂದ ವಿದ್ಯಾರ್ಥಿಗಳು ನವೆಂಬರ್ 24 ರಂದು ತಮ್ಮ ಮನೆಗೆ ಮರಳಿದ್ದರು. ಆರಂಭದಲ್ಲಿ ಬಾಲಕಿ ಘಟನೆಯ ಬಗ್ಗೆ ಮೌನವಾಗಿದ್ದಳು. ಆದರೆ ನಂತರ ಘಟನೆಗಳ ಕುರಿತು ಸಂಪೂರ್ಣವಾಗಿ ತನ್ನ ಕುಟುಂಬ ಸದಸ್ಯರಿಗೆ ವಿವರಿಸಿದಳು ಎಂದು ಅವರು ಹೇಳಿದರು.



ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ನಾಪತ್ತೆಯಾಗಿರುವ ಪ್ರಾಂಶುಪಾಲರನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು