LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

5 ನೇ ತರಗತಿ ವಿದ್ಯಾರ್ಥಿನಿಯನ್ನು ಮೊದಲ ಮಹಡಿಯಿಂದ ಎಸೆದ ಶಿಕ್ಷಕಿ

ಹೊಸದಿಲ್ಲಿ: ಶಿಕ್ಷಕಿಯೊಬ್ಬಳು 5 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಕತ್ತರಿಯಿಂದ ಚುಚ್ಚಿ ಬಳಿಕ ಮೊದಲ ಮಹಡಿಯಿಂದ ಎಸೆದ ಬೆಚ್ಚಿ ಬೀಳಿಸುವ ಘಟನೆ ದೆಹಲಿಯಲ್ಲಿ ನಡೆದಿದೆ. ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.





ಕೇಂದ್ರ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದಲ್ಲಿ ನಡೆದ ಘಟನೆಯ ನಂತರ ಭಾರಿ ಜನಸ್ತೋಮ ಜಮಾಯಿಸಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.



ಗೀತಾ ದೇಶ್ವಾಲ ಎಂದು ಗುರುತಿಸಲಾದ ಶಿಕ್ಷಕಿ ಮೊದಲು ಬಾಲಕಿಯನ್ನು ಸಣ್ಣ ಕತ್ತರಿಯಿಂದ ಹೊಡೆದು ನಂತರ ಕಟ್ಟಡದ ಮೊದಲ ಮಹಡಿಯಿಂದ ಎಸೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡಿರುವ ಬಾಲಕಿ ಹಿಂದೂ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿಸಿದ್ದಾರೆ.



ಪ್ರತ್ಯಕ್ಷದರ್ಶಿಯ ಹೇಳಿಕೆಯ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಶ್ವೇತಾ ಚೌಹಾಣ ಹೇಳಿದ್ದಾರೆ.



ವಿದ್ಯಾರ್ಥಿಯನ್ನು ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲಾ ಅಗತ್ಯ ಪರೀಕ್ಷೆಗಳನ್ನು ಮಾಡಲಾಗಿದೆ. ಮಗು ಸುರಕ್ಷಿತ ಮತ್ತು ಸ್ಥಿರವಾಗಿದೆ ಮತ್ತು ಉತ್ತಮವಾಗಿ ಪ್ರತಿಕ್ರಿಯಿಸುತ್ತದೆ. ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಸಿಡಿ ಕೂಡ ತಕ್ಷಣವೇ ಜಾರಿಗೆ ಬರುವಂತೆ ಅವಳನ್ನು ಅಮಾನತುಗೊಳಿಸಿದೆ. ಇಲಾಖೆಯಿಂದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಂಸಿಡಿ ಹಿರಿಯ ಅಧಿಕಾರಿ ತಿಳಿಸಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ