LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೂರು ಗಂಟೆ ಹೃದಯ ಬಡಿತ ನಿಂತರೂ ಬದುಕುಳಿದ ಮಹಿಳೆ!

ಲಖನೌ : ಉತ್ತರ ಪ್ರದೇಶದ ಮೀರತ್‌ನಲ್ಲಿ ಮೂರು ಗಂಟೆ ಹೃದಯ ಕೆಲಸ ಮಾಡದೇ ನಿಂತರೂ ಮಹಿಳೆ ಬದುಕಿರುವ ಘಟನೆ ಬೆಳಕಿಗೆ ಬಂದಿದೆ.



ಮೀರತ್ ನ ಕಂಕರ‌ ಖೇಡಾ ನಿವಾಸಿ 34 ವರ್ಷದ ಕವಿತಾ ರಾಜು ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವಾಗ ಅವರ ಹೃದಯ 210 ನಿಮಿಷ ನಿಂತರೂ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.



ವೀರತ‌ ಲಾಲಾ ಲಜಪತ‌ ರಾಯ್‌ ಮೆಮೊರಿಯಲ್‌ ವೈದ್ಯಕೀಯ ಕಾಲೇಜಿನಲ್ಲಿ ಈ ಅದ್ಬುತ ಪವಾಡ ನಡೆದಿದೆ.



ಆದರೆ ಇಷ್ಟು ಗಂಟೆಗಳ ಕಾಲ ಸಹಜ ಹೃದಯ ಬಡಿತವನ್ನು ನಿಲ್ಲಿಸಿರುವುದು ವೈದ್ಯಕೀಯ ಲೋಕದಲ್ಲೇ ತಲ್ಲಣ ಮೂಡಿಸಿದೆ . ಒಂದು ವೇಳೆ ಶಸ್ತ್ರ ಚಿಕಿತ್ಸೆ ಮಾಡುವಾಗ ಮೂರು ನಿಮಿಷ ಕಾಲ ಮೆದುಳಿಗೆ ರಕ್ತ ಪೂರೈಕೆ ಆಗದಿದ್ದರೆ ಮೆದುಳು ನಿಷ್ಕ್ರೀಯಗೊಳ್ಳುವ ಸಾಧ್ಯತೆ ಇರುತ್ತದೆ.



ಪ್ರತಿಯೊಬ್ಬ ರೋಗಿಗೆ ಶಸ್ತ್ರ ಚಿಕಿತ್ಸೆಯ ವೇಳೆ 3 ನಿಮಿಷ ತುಂಬಾ ಅಮೂಲ್ಯವಾಗಿದೆ. ಕವಿತಾ ಅವರು ಕಳೆದ ಎರಡು ವರ್ಷಗಳಿಂದ ಅಸಹಜ ಹೃದಯ ಬಡಿತ ಮತ್ತು ಎದೆ ನೋವಿನಿಂದ ಬಳಲುತ್ತಿದ್ದರು.



ಹಲವು ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ಸಮಾಲೋಚನೆ ನಡೆಸಿದರೂ, ಚಿಕಿತ್ಸೆ ಮಾತ್ರ ಸಿಕ್ಕಿರಲಿಲ್ಲ. ಅವರು ಮೀರತ್ ವೈದ್ಯಕೀಯ ಕಾಲೇಜಿನ ಕಾರ್ಡಿಯೋ ಥೋರಾಸಿಕ್ ಸರ್ಜನ್​ ಜತೆ ಸಮಾಲೋಚನೆ ನಡೆಸಿದ್ದರು. ಅವರನ್ನು ಪರೀಕ್ಷೆ ಮಾಡಿದಾಗ ಮಿಟ್ರಲ್ ವಾಲ್ವ್ ಹಾನಿಗೊಳಗಾಗಿರುವುದು ಕಂಡುಬಂದಿತ್ತು. ಮಿಟ್ರಲ್ ಕವಾಟವನ್ನು ಬದಲಿಸಲು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯವಾಗಿತ್ತು ಮತ್ತು ಇದೀಗ ಯಶಸ್ವಿಯಾಗಿದ್ದೇವೆ ಎಂದು ವೈದ್ಯಕೀಯ ಕಾಲೇಜಿನ ಮಾಧ್ಯಮ ಪ್ರಭಾರಿ ಡಾ. ವಿ.ಡಿ. ಪಾಂಡೆ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ