LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪೊಲೀಸ್ ಠಾಣೆಯಲ್ಲಿ ಕುತ್ತಿಗೆ ಕೊಯ್ದುಕೊಂಡ ಯುವಕ 

ಹುಬ್ಬಳ್ಳಿ : ಊಟದ ವಿಷಯದಲ್ಲಿ ಹೋಟೆಲ್ ಮಾಲೀಕರೊಬ್ಬರೊಂದಿಗೆ ಜಗಳವಾಡಿಕೊಂಡು ನಂತರ ಅವರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದ ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.



ಹಳೇ ಹುಬ್ಬಳ್ಳಿಯ ಇಂಡಿ ಪೆಟ್ರೋಲ್ ಪಂಪ್ ಸರ್ಕಲ್ ಬಳಿಯ ಬಿರಿಯಾನಿ ಹೌಸ್ ಹೋಟೆಲಗೆ ಊಟಕ್ಕೆ ಹೋಗಿದ್ದ ರಾಘವೇಂದ್ರ ಎಂಬ ಯುವಕ ಮಾಲೀಕರೊಂದಿಗೆ ಊಟದ ವಿಷಯದಲ್ಲಿ ಆಕ್ಷೇಪಿಸಿದ್ದಾರೆ. ಆಗ ಉಭಯರ ಮಧ್ಯೆ ವಾದವಾಗಿದೆ.



ಮಾತಿಗೆ ಮಾತು ಬೆಳೆದು ಅತಿರೇಕಕ್ಕೆ ಹೋಗಿ ಹೋಟೆಲ್ ಮಾಲೀಕರು ರಾಘವೇಂದ್ರ ನನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.



ಆಗ ಪೊಲೀಸರು ಇಬ್ಬರನ್ನೂ ವಿಚಾರಿಸುತ್ತಿದ್ದರು, ತಕ್ಷಣ ತನ್ನ ಬಳಿಯಲ್ಲಿದ್ದ ಗಡ್ಡ ತೆಗೆಯಲು ಬಳಸುವ ಬ್ಲೇಡ್ ತೆಗೆದ ರಾಘವೇಂದ್ರ ಪೊಲೀಸರ ಮುಂದೆಯೇ ಬ್ಲೇಡನಿಂದ ತಮ್ಮ ಕುತ್ತಿಗೆ ಕೊಯ್ದುಕೊಂಡಿದ್ದಾರೆ.



ಈ ವೇಳೆ ವಿಚಾರಣೆ ಮಾಡುತ್ತಿದ್ದ ಠಾಣೆಯ ಹಿರಿಯ ಪೊಲೀಸ ಅಧಿಕಾರಿಗಳು ರಾಘವೇಂದ್ರ ಅವರನ್ನು ಆಸ್ಪತ್ರೆಗೆ ಸೇರಿಸುವಂತೆ ತಮ್ಮ ಅಧೀನದ ಸಿಬ್ಬಂದಿಗಳಿಗೆ ಆದ್ದೇಶಿಸಿ ಠಾಣೆಯಿಂದ ಹೊರಗೆ ಹೋದರೆಂದು ತಿಳಿದು ಬಂದಿದೆ.



ಹೋಟೆಲ್ ಮಾಲೀಕರ ಪರಿಚಯವಿದ್ದ ಪೊಲೀಸರು ಅವರ ಪರವಾಗಿ ವಾದಿಸಿ ರಾಘವೇಂದ್ರ ಅವರನ್ನು ಹಲವು ಕೇಸ್ ಹಾಕಿ ಬೆದರಿಸಿದ್ದಾರೆ. ಇದರಿಂದ ಹೆದರಿ ರಾಘವೇಂದ್ರ ಬ್ಲೇಡ್ ನಿಂದ ತಮ್ಮ ಕುತ್ತಿಗೆ ಕೊಯ್ದು ಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಕ್ತಸ್ರಾವವಾಗುತ್ತಿದ್ದ ರಾಘವೇಂದ್ರನನ್ನು ಹೋಟೆಲ್ ನವರೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ