LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಮೋದಿ; ಭಾರಿ ಭದ್ರತಾ ವ್ಯವಸ್ಥೆಯೊಂದಿಗೆ ಸಕಲ ಸಿದ್ಧತೆ ಪೂರ್ಣ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ ಹುಬ್ಬಳ್ಳಿಗೆ ಭೇಟಿ ನೀಡಿ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.



ಯುವಜನೋತ್ಸವ ಉದ್ಘಾಟನಾ ಸಮಾರಂಭ ಒಂದೂವರೆ ಗಂಟೆಯ ಕಾರ್ಯಕ್ರಮವಾಗಿದ್ದು, ಸಂಜೆ 4 ಗಂಟೆಗೆ ಆರಂಭವಾಗಿ ಸಂಜೆ 5.30ರ ಸುಮಾರಿಗೆ ಪೂರ್ಣಗೊಳ್ಳಲಿದೆ. ಪ್ರಧಾನಿ ಮೋದಿಯವರು 30-40 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ.



ರೇಲ್ವೆ ಮೈದಾನದಲ್ಲಿ ಉತ್ಸವ ಉದ್ಘಾಟನೆಯಾಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪಥ ಸಂಚಲನ ಸಾಗುವ ಪ್ರದೇಶಗಳನ್ನು ಅಲಂಕರಿಸಲಾಗಿದೆ. ರಸ್ತೆ ದುರಸ್ತಿ ಹಾಗೂ ಅಕ್ಕಪಕ್ಕ ಬಣ್ಣ ಬಳಿಯಲಾಗಿದೆ. ಪ್ರಧಾನಿ ಆಗಮನದ 30 ನಿಮಿಷಗಳ ಮೊದಲು ಮತ್ತು ಅವರ ನಿರ್ಗಮನದ ನಂತರ ಈ ರಸ್ತೆಗಳಲ್ಲಿ ಸಂಚಾರವನ್ನು ನಿಯಂತ್ರಿಸಲಾಗುವದು. ಪೊಲೀಸರು ಈಗಾಗಲೇ ಸಂಚಾರ ವ್ಯತ್ಯಯ ಹಾಗೂ ಮಾರ್ಗ ಬದಲಾವಣೆಗಳನ್ನು ಘೋಷಿಸಿದ್ದಾರೆ.



ಪೊಲೀಸರು ಭಾರಿ ಭದ್ರತಾ ವ್ಯವಸ್ಥೆ ಮಾಡಿದ್ದು ಬಾಂಬ್ ಪತ್ತೆ ಮತ್ತು ಶ್ವಾನ ದಳ ಸಹ ನಿಯೋಜಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ ಕುಮಾರ ಅವರು ಬುಧವಾರ ಕಾರ್ಯಕ್ರಮದ ಸ್ಥಳ ಮತ್ತು ನಗರದಾದ್ಯಂತ ಭದ್ರತಾ ಕ್ರಮಗಳನ್ನು ಪರಿಶೀಲಿಸಿದರು.



ಏಳು ಎಸ್‌ಪಿ ಶ್ರೇಣಿಯ ಅಧಿಕಾರಿಗಳು, 25 ಡಿಎಸ್‌ಪಿಗಳು, 60 ಇನ‌ಸ್ಪೆಕ್ಟರ್‌ಗಳು, ಕೆಎಸ್‌ಆರ್‌ಪಿ, ಸಿಎಆರ್ ಮತ್ತು ಡಿಎಆರ್ ಸಿಬ್ಬಂದಿ ಸೇರಿದಂತೆ ಒಟ್ಟು 2,900 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಲೋಕಕುಮಾರ ಮಾಹಿತಿ ನೀಡಿದ್ದಾರೆ.



2012ರಲ್ಲಿ ಮಂಗಳೂರಿನಲ್ಲಿ ಒಂದು ದಿನದ ಯುವಜನೋತ್ಸವ ನಡೆದಿತ್ತು. ಇದೀಗ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಯುವಜನೋತ್ಸವದ ಆತಿಥ್ಯ ಸಿಕ್ಕಿದೆ. ಉತ್ಸವದ ಉದ್ಘಾಟನೆ ಹುಬ್ಬಳ್ಳಿಯಲ್ಲಿ ನಡೆದ ನಂತರ ಐದು ದಿನಗಳ ಕಾರ್ಯಕ್ರಮಗಳೆಲ್ಲವೂ ಧಾರವಾಡದಲ್ಲಿ ನಡೆಯಲಿವೆ. ಇದಕ್ಕೆ ಬೇಕಾದ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕಾರ್ಯಕ್ರಮಕ್ಕೆ ಭಾಗವಹಿಸಬೇಕಿದ್ದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಜನರು ಈಗಾಗಲೇ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು