LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಜಿಲ್ಲೆಯಿಂದ ಮತ್ತೊಬ್ಬ ಮಟ್ಕಾ ಬುಕ್ಕಿ ಗಡಿಪಾರು

ಬೆಳಗಾವಿ: ನಗರದಲ್ಲಿ ಮಟ್ಕಾ ಆಡಲು ಜನರನ್ನು ಹುರಿದುಂಬಿಸುತ್ತಿದ್ದ ಮಟ್ಕಾ ಬುಕ್ಕಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಬಿಸಿ ಮುಟ್ಟಿಸಿದ್ದಾರೆ.



ನಗರದ ಅನಗೋಳದ ಪರಶುರಾಮ ಬಾಬು ಮೇತ್ರಿ ಎಂಬಾತನನ್ನು ಒಂದು ವರ್ಷಗಳ ಕಾಲ ಅಂದರೆ ಸೆಪ್ಟೆಂಬರ್, 18 - 2023ರ ವರೆಗೆ ಗಡಿಪಾರು ಮಾಡಲಾಗಿದೆ. ಬೆಳಗಾವಿಯಿಂದ ಬಳ್ಳಾರಿ ಜಿಲ್ಲೆಗೆ ಗಡಿಪಾರು ಮಾಡಿ ಗಡಾದಿ ಆದೇಶ ಹೊರಡಿಸಿದ್ದಾರೆ. ಪರಶುರಾಮ ಮೇತ್ರಿ ವಿರುದ್ಧ ಏಳು ಪ್ರಕರಣಗಳು ದಾಖಲಾಗಿದ್ದವು. ಆರೋಪಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಕೂಡ ಆಗಿತ್ತು.



ಆದರೂ ಸಾರ್ವಜನಿಕವಾಗಿ ಮಟ್ಕಾ ಆಡಲು ಜನರನ್ನು ಪ್ರೇರೇಪಿಸುತ್ತಿದ್ದನು. ಈ ಬಗ್ಗೆ ಪೊಲೀಸರು ಈತನನ್ನು ಕರೆಯಿಸಿ ವಿಚಾರಣೆ ನಡೆಸಿ ಅನೇಕ ಸಲ ಎಚ್ಚರಿಕೆ ನೀಡಿದ್ದರೂ ಮಟ್ಕಾ ದಂಧೆಯಲ್ಲಿ ತೊಡಗಿದ್ದನು. ಹೀಗಾಗಿ ಡಿಸಿಪಿ ಗಡಾದಿ ಆರೋಪಿ ಪರಶುರಾಮನಿಗೆ ಗಡಿಪಾರು ಮಾಡುವ ಮೂಲಕ ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.



ಮೂರು ತಿಂಗಳ ಹಿಂದೆಯೂ ಇದೇ ರೀತಿಯಾಗಿ ಮಟ್ಕಾ ಆಡುತ್ತ ಜನರನ್ನು ಪ್ರೇರೇಪಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬೆಳಗಾವಿ ಜಿಲ್ಲೆಯಿಂದ ಡಿಸಿಪಿ ಗಡಾದಿ ಗಡಿಪಾರು ಮಾಡಿದ್ದರು.



ಮಾರೀಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮಹೇಶ ಯಲ್ಲಪ್ಪ ಯಲ್ಲಾರಿ,‌ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಲಾಶ ಶಂಕರ ಬಾಳೆಕುಂದ್ರಿ ಎಂಬಾತರನ್ನು ಗಡಿಪಾರು ಮಾಡಿದ್ದರು. ಈಗ ಮತ್ತೊಬ್ಬ ಆರೋಪಿಯನ್ನು ಗಡಿಪಾರು ಮಾಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು