LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೆಳಗಾವಿಯಲ್ಲಿ ಮತ್ತೊಬ್ಬ ಅತ್ಯಾಚಾರಿಗೆ ಕಠಿಣ ಶಿಕ್ಷೆ ಜಾರಿ

ಬೆಳಗಾವಿ :ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿತನಿಗೆ 30 ವರ್ಷಗಳ ಕಠಿಣ ಶಿಕ್ಷೆ, ರೂ.10,000 ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.



ಸವದತ್ತಿ ತಾಲೂಕು ಅರ್ಟಗಲ್ ನಿವಾಸಿ ಶಿವಪ್ಪ ಭೀಮಪ್ಪ ತ್ಯಾಪಿ (26) ಶಿಕ್ಷೆಗೊಳಗಾದ ಆರೋಪಿ.



ನೊಂದ ಬಾಲಕಿ ಅಪ್ರಾಪ್ತ ವಯಸ್ಸಿನವಳು ಎಂದು ಗೊತ್ತಿದರೂ 11-11-2020 ರಂದು ಆರೋಪಿ ಶಿವಪ್ಪ ಭೀಮಪ್ಪ ತ್ಯಾಪಿ ಇವನ್ನು ಬಾಲಕಿ ತನ್ನ ಮನೆಯ ಹಿಂಬದಿಯಲ್ಲಿ ಮೂತ್ರವಿಸರ್ಜನೆ ಮಾಡಲು ಹೋದಾಗ ಆರೋಪಿತ ಹಿಂಬದಿಯಿಂದ ಹೋಗಿ ಆಕೆಯ ಬಾಯಿಗೆ ಟವೆಲ್ ಸುತ್ತಿ ಹಿಂಬದಿಯಲ್ಲಿದ್ದ ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಅತ್ಯಾಚಾರವೆಸಗಿದ್ದ.



ಸವದತ್ತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಈ ಅಪರಾದಕ್ಕಾಗಿ ದಾಖಲಾಧಿಕಾರಿ ಎಂ.ಜಿ. ಮಾರಿಹಾಳ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ಕ್ರಮಕ್ಕಾಗಿ ತನಿಖಾಧಿಕಾರಿ ಮಂಜುನಾಥ ಐ ನಡುವಿನಮನಿ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಬೆಳಗಾವಿ ಈ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.



ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಪ್ರಕರಣವನ್ನು ವಿಚಾರಣೆ ಮಾಡಿ, ಒಟ್ಟು 8 ಸಾಕ್ಷಿಗಳ ವಿಚಾರಣೆ ಮೇಲಿಂದ ಹಾಗೂ 30 ದಾಖಲೆಗಳು ಹಾಗೂ 16 ಮುದ್ದೆಮಾಲುಗಳ ಆಧಾರದ ಮೇಲಿಂದ ಆರೋಪಿ ಶಿವಪ್ಪ ಭೀಮಪ್ಪ ತ್ಯಾಪಿ ಇವನ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು ತೀರ್ಪು ನೀಡಿದ್ದಾರೆ.



ಆರೋಪಿತನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ.10.000/- ದಂಡ ವಿಧಿಸಿದ್ದು, ದಂಡದ ಮೊತ್ತ ತುಂಬದೆ ಇದ್ದ ಕಾಲಕ್ಕೆ 1 ವರ್ಷಗಳ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.



ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ. 4 ಲಕ್ಷಗಳನ್ನು ಪರಿಹಾರಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿದೆ. ಪರಿಹಾರ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ 5 ವರ್ಷಗಳವರೆಗೆ ಮುದ್ದತ್ತು ಠೇವಣಿಯಾಗಿ ಇಡಲು ನ್ಯಾಯಾಲಯ ಆದೇಶಿಸಿದೆ.



ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಲ್. ವಿ.ಪಾಟೀಲ ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ