LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತದಾರರ ಪಟ್ಟಿ ಅಕ್ರಮ : ತನಿಖೆಗೆ 7 ಜನ ಐಎಎಸ್ ಅಧಿಕಾರಿಗಳ ನೇಮಕ

ಹೊಸದಿಲ್ಲಿ : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳೂ ಭಾಗಿಯಾಗಿರುವುದು ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿತ್ತು.



ಆದರೆ ಇಬ್ಬರು ಐಎಎಸ್‌ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಭಾಗಿಯಾಗಿರುವುದು ದೃಢಪಟ್ಟಿದೆ.



ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿದ್ದು, ವೋಟರ್ ಐಡಿ ಅಕ್ರಮದ ಬಗ್ಗೆ ತನಿಖೆಗಾಗಿ ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಿಸಿದೆ.



ಮತದಾರ ಪಟ್ಟಿಯಿಂದ ತೆಗೆದು ಹಾಕಿರುವುದು, ಸೇರ್ಪಡೆ, ತಿದ್ದುಪಡಿ ಬಗ್ಗೆ ಪೂರ್ಣಪರಿಶೀಲನೆ ಎಂದು ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಕ ಮಾಡಿ ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಿದೆ. ಅದರಲ್ಲೂ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ವಲಯದಲ್ಲಿ ವಿಶೇಷವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದೆ.



ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಆದವರ ಬಗ್ಗೆ ಕೂಲಂಕಷವಾಗಿ ಪರಿಶೀಲನೆಗೆ ಆದೇಶಿಸಿದ್ದು, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಕೂಡಾ ಅಮಾನತು ಮಾಡಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ