LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಕೋಪ ನಿರ್ವಹಣೆಗೆ ಸಚಿವರ ನೇಮಕ: ಜಿಲ್ಲಾವಾರು ಉಸ್ತುವಾರಿ ಹಂಚಿಕೆ

ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಸಂಭವಿಸಬಹುದಾದ ನೈಸರ್ಗಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಮೇಲ್ವಿಚಾರಣೆಗೆ ಕರ್ನಾಟಕ ಸರ್ಕಾರವು ಉಪ ಮುಖ್ಯಮಂತ್ರಿ ಹಾಗೂ ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ.

ವಿಕೋಪ ನಿರ್ವಹಣಾ ಕಾರ್ಯಗಳ ಸಮನ್ವಯ, ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಮೇಲ್ವಿಚಾರಣೆಗಾಗಿ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿಯನ್ನು ವಹಿಸಲಾಗಿದೆ.

ಜಿಲ್ಲಾವಾರು ಉಸ್ತುವಾರಿ ಸಚಿವರ ಪಟ್ಟಿ:

  1. ಡಾ. ಜಿ. ಪರಮೇಶ್ವರ – ತುಮಕೂರು, ಚಿತ್ರದುರ್ಗ
  2. ಕೆ.ಎಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ
  3. ರಾಮಲಿಂಗಾರೆಡ್ಡಿ – ಬೆಂಗಳೂರು ದಕ್ಷಿಣ, ಮಂಡ್ಯ
  4. ಎಂ.ಬಿ. ಪಾಟೀಲ – ವಿಜಯಪುರ, ಬಾಗಲಕೋಟೆ
  5. ಕೆ.ಜೆ. ಜಾರ್ಜ್ – ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ
  6. ಕೃಷ್ಣ ಬೈರೇಗೌಡ – ಬೆಂಗಳೂರು ನಗರ, ಹಾಸನ
  7. ಈಶ್ವರ್ ಖಂಡ್ರೆ – ಬೀದರ್, ಗದಗ
  8. ಸತೀಶ ಜಾರಕಿಹೊಳಿ – ಬೆಳಗಾವಿ, ಧಾರವಾಡ, ಹಾವೇರಿ
  9. ಪ್ರಿಯಾಂಕ್ ಖರ್ಗೆ – ಕಲಬುರಗಿ, ಯಾದಗಿರಿ
  10. ಶರಣಪ್ರಕಾಶ ರುದ್ರಪ್ಪ ಪಾಟೀಲ – ರಾಯಚೂರು, ಕೊಪ್ಪಳ
  11. ಯು.ಟಿ. ಖಾದರ್ ಫರೀದ್ – ಉಡುಪಿ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ
  12. ಭೈರತಿ ಸುರೇಶ್ – ಕೋಲಾರ, ಚಿಕ್ಕಬಳ್ಳಾಪುರ
  13. ಡಾ. ಯತೀಂದ್ರ ಸಿದ್ದರಾಮಯ್ಯ – ಮೈಸೂರು, ಚಾಮರಾಜನಗರ

ರಾಜ್ಯದಲ್ಲಿ ಮಳೆಗಾಲದ ಸಂದರ್ಭದಲ್ಲಿ ಎದುರಾಗುವ ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ನೈಸರ್ಗಿಕ ವಿಕೋಪಗಳ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಾಧಿಸಲು ಈ ನೇಮಕಾತಿ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಕೋಪ ನಿರ್ವಹಣೆಗೆ ಸಚಿವರ ನೇಮಕ: ಜಿಲ್ಲಾವಾರು ಉಸ್ತುವಾರಿ ಹಂಚಿಕೆಜುಲೈ 1ರಿಂದ ವಿಬಿ-ಜಿ ರಾಮ್ ಜಿ ಜಾರಿ; ಹೆಚ್ಚುವರಿ ಹೊರೆ ಭರಿಸಲು ರಾಜ್ಯ ಸಿದ್ಧ: ಖಂಡ್ರೆಸಚಿವ ಸತೀಶ ಜಾರಕಿಹೊಳಿ ಭಾಮೈದ ಮಂಜುನಾಥಗೆ ಈಡಿ ಬಿಗ್ ಶಾಕ್: ಆರು ಕಡೆ ಏಕಕಾಲದ ದಾಳಿಹಸೆಮಣೆ ಏರಬೇಕಿದ್ದ ಯುವತಿ, ತಂದೆ-ತಾಯಿ ಆತ್ಮಹತ್ಯೆದುಡ್ಡು ಕೊಟ್ಟು ಖರೀದಿಸಿ ತಂದ 17 ಕಾಂಗ್ರೆಸ್‌ ಶಾಸಕರಿಂದಲೇ ಬಿಜೆಪಿ ಹಾಳಾಯ್ತು : ಈಶ್ವರಪ್ಪ ಬಾಂಬ್ಕನ್ನಡ ಆದೇಶ ಹರಿದು ಎಂಇಎಸ್‌ ಪುಂಡಾಟ: ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆಮೊಸರು ಪ್ಯಾಕೆಟನಲ್ಲಿ ಸತ್ತ ಇಲಿ ಮರಿ ಪತ್ತೆ!ಅಶ್ಲೀಲ ವಿಡಿಯೋಗಳ ವೀಕ್ಷಣೆ ; 9 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 12 ವರ್ಷದ ಬಾಲಕ!ನೀಟ್‌ ಮರುಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲಯುವತಿಯೊಂದಿಗೆ ಹೊಟೇಲ್‌ಗೆ ತೆರಳಿದ್ದ ಯುವಕನ ಮೇಲೆ ಹಲ್ಲೆ