LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಕಲಿ ಮೈಕ್ರೋ ಫೈನಾನ್ಸ ರಿಕವರಿ ಎಜೆಂಟರ ಬಂಧನ

ರಾಯಚೂರು: ಮೈಕ್ರೋ ಫೈನಾನ್ಸ ಹಾವಳಿ ಒಂದೆಡೆಯಾದರೆ, ಇನ್ನೊಂದು ಕಡೆ ನಕಲಿ ಸಾಲ ರಿಕವರಿ ತಂಡವೊಂದು ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ ಸಾಲ ರಿಕವರಿ ತಂಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.



ಆರೋಪಿಗಳನ್ನು ಫಯಾಜ, ಶೇಖ ಎಂಡಿ ಆಯುಬ, ಸೈಯದ ಶಹಬಾಜ ಅಹ್ಮದ, ಅರೋನ್ ರಸೀದ ಎಂದು ಗುರುತಿಸಲಾಗಿದೆ. ಈ ತಂಡ ಮೊಬೈಲ್ ಆ್ಯಪನಲ್ಲಿ ಫೈನಾನ್ಸಗಳ ಸಾಲ ಬಾಕಿ ಇರುವವರನ್ನ ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನು ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕುತ್ತಿದ್ದರು.



ಯಾದಗಿರಿ ಜಿಲ್ಲೆ ಗುಂಡ್ಲೂರಿನ ಸೈಯದ ಬಾಷಾ ಎಂಬುವವರ ಬೊಲೆರೋ ವಾಹನವನ್ನು ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹಿಡಿದು 12 ಸಾವಿರ ರೂ. ಬೇಡಿಕೆ ಇಟ್ಟು ವಾಹನ ಜಪ್ತಿ ಮಾಡಿದ್ದರು. ಸಾಲ ಮಾಡಿದ್ದ ಫೈನಾನ್ಸ್ ಕಂಪನಿಯಲ್ಲಿ ಸೈಯದ್ ಬಾಷಾ ಕಂತು ಕಟ್ಟಿ ಬಂದಿದ್ದರೂ ವಾಹನ ಬಿಟ್ಟಿರಲಿಲ್ಲ. ಫೈನಾನ್ಸನಲ್ಲಿ ಕಟ್ಟಿದರೆ ಸಾಲಲ್ಲ, ನಮಗೂ ಹಣ ಕೊಡಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಅನುಮಾನದ ಮೇಲೆ ಸೈಯದ್ ಬಾಷಾ ಸಹೋದರ ಅಜೀಜ ಅವರು ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.



ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆಲ ವರ್ಷಗಳಿಂದ ಈ ನಕಲಿ ದಂಧೆಯಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ