LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿದ ನಾಲ್ವರ ಬಂಧನ 

ಬೆಳಗಾವಿ : ಮಗಳನ್ನು ಚುಡಾಯಿಸಿದನ್ನು ಪ್ರಶ್ನಿಸಿಲು ಹೋಗಿದ್ದ ವ್ಯಕ್ತಿ ಮತ್ತು ಆತನ ಜೊತೆಗಿದ್ದವರನ್ನೂ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಲಹೊಂಗಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.



ಬಸವೇಶ್ವರ ನಗರದ ಆಶ್ರಯ ಕಾಲೋನಿಯ ಪಿಯುಸಿ 1 ರಲ್ಲಿ ಓದುವ ಸಾದಿಕ ಮನಿಯಾರ ಎಂಬವ ಪಕ್ಕದ ಮನೆಯ ತನ್ನದೇ ಕೋಮಿನ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಅದನ್ನು ಆಕೆ ತನ್ನ ಮನೆಯವರಿಗೆ ತಿಳಿಸಿದ್ದಳು.



ಅದಕ್ಕೆ ಹುಡುಗಿಯ ತಂದೆ ಸಾದಿಕನಿಗೆ ಎಚ್ಚರಿಕೆ ನೀಡಿ ಆತನ ಮನೆಯವರಿಗೆ ಬುದ್ಧಿ ಹೇಳಲು ತಿಳಿಸಿದ್ದರು. ನಿನ್ನೆ ಶಾಲೆಯಿಂದ ಮನೆಗೆ ಮರಳುವಾಗ ಆತ ಪುನಃ ಚುಡಾಯಿಸಿದ್ದಾನೆ. ಅಳುತ್ತಾ ಮನೆಗೆ ಬಂದ ಬಾಲಕಿ ಮನೆಯವರಿಗೆ ತಿಳಿಸಿದ್ದಾಳೆ.



ಹುಡುಗಿಯ ತಂದೆ ಇದಕ್ಕೊಂದು ಕೊನೆ ಹೇಳಬೇಕೆಂದು ತಮ್ಮ ಪರಿಚಯಸ್ಥ ಹಿರಿಯರಾದ ಅತಾವುಲ್ಲಾ ಹುಬ್ಬಳ್ಳಿ, ಮುನೀರ ಬೇಪಾರಿ, ರಫೀಕ ಕೊರವಿನಕೊಪ್ಪ ಮತ್ತು ಮೆಹಬೂಬ ಹುಬ್ಬಳ್ಳಿ ಅವರೊಂದಿಗೆ ಸಾದಿಕನ ಮನೆಗೆ ತೆರಳಿ ವಿಚಾರಿಸಿದ್ದಾರೆ.



ಈ ಸಂದರ್ಭದಲ್ಲಿ ತೀವ್ರ ವಾದ-ವಿವಾದ ನಡೆದು ಸಾದಿಕನು ತನ್ನ ಜೊತೆಯಲ್ಲಿದ್ದ ಸ್ನೇಹಿತರಾದ ಚೌಡಪ್ಪ ಬಂಡಿವಡ್ಡರ, ಫುರಕಾನ ಜಮಾದಾರ, ರಮಜಾನ ನದಾಫ ಹಾಗೂ ಕೆಲವರೊಂದಿಗೆ ಸೇರಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ ಅವರು ಸಮದರ್ಶಿಗೆ ತಿಳಿಸಿದರು.



ತೀವ್ರವಾಗಿ ಗಾಯಗೊಂಡಿರುವ ಅತಾವುಲ್ಲಾ ಹುಬ್ಬಳ್ಳಿ, ಮುನೀರ ಬೇಪಾರಿ, ರಫೀಕ ಕೊರವಿನಕೊಪ್ಪ ಮತ್ತು ಮೆಹಬೂಬ ಹುಬ್ಬಳ್ಳಿ ಇವರಿಗೆ ಬೈಲಹೊಂಗಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.



ಪ್ರಕರಣ ಬೇರೆ ರೂಪ ಪಡೆಯದಂತೆ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಮಾರ್ಕೆಟ್ ಪೊಲೀಸ್ ವಿಭಾಗದ ಎಸಿಪಿ ಎನ್ ವಿ ಭರಮನಿ ನೇತೃತ್ವದಲ್ಲಿ ಸುಮಾರು 20 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ