LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸವದತ್ತಿ; ಭೀಕರ ಅಪಘಾತ : ಎಎಸ್​ಐ ಪತ್ನಿ ಸೇರಿದಂತೆ ನಾಲ್ವರ ಸಾವು

ಸವದತ್ತಿ: ಕಾರು ಮತ್ತು ಬೈಕ್​ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ.



ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ ಕದಂ(24), ಬೈಕ್​ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್​ ಠಾಣೆಯ ಎಎಸ್​ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.



ಬೆಳಗಾವಿ-ಬಾಗಲಕೋಟ ರಸ್ತೆಯ ಬೂದಿಗೊಪ್ಪ ಕ್ರಾಸ್​ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು.ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್​ಗೆ ಅದು ಢಿಕ್ಕಿ ಹೊಡೆದಿದೆ.



ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ ಅವರು ಭೇಟಿ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ