LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ವಿವಾಹಿತೆಯೊಂದಿಗೆ ಪರಾರಿಯಾದ ಯುವಕನ ಮನೆ ಮೇಲೆ ದಾಳಿ; ಮನೆ ಧ್ವಂಸ, ಚಿನ್ನಾಭರಣ, 25 ಕುರಿ ದೋಚಿದ ಆರೋಪ

ಬೆಳಗಾವಿ, ಜೂ. 30: ವಿವಾಹಿತೆಯೊಬ್ಬಳು ಯುವಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಹಾಗೂ ಪತಿಯ ಕಡೆಯ ಸಂಬಂಧಿಕರು ಯುವಕನ ಮನೆ ಮೇಲೆ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿ ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಕುಟುಂಬವು ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

news_1782804352_0_108.webp

ಪೊಲೀಸ್ ಮೂಲಗಳ ಪ್ರಕಾರ, ಒಂದು ವರ್ಷದ ಹಿಂದೆ ಬಸಪ್ಪ ನಾಯಕ ಅವರೊಂದಿಗೆ ನಾಗವ್ವ ವಿವಾಹವಾಗಿತ್ತು. ಬಸಪ್ಪ ನಾಯಕ ಹಾಗೂ ಯಲ್ಲಪ್ಪ ನಾಯಕ ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರೂ ನಾಗವ್ವ ಜತೆ ಬೆಳಗಾವಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಯಲ್ಲಪ್ಪ ಮತ್ತು ನಾಗವ್ವ ನಡುವೆ ಆತ್ಮೀಯತೆ ಬೆಳೆದಿದ್ದು, ಎರಡು ದಿನಗಳ ಹಿಂದೆ ಇಬ್ಬರೂ ಗ್ರಾಮದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

news_1782804393_0_929.webp

ಈ ಬೆಳವಣಿಗೆಯಿಂದ ಆಕ್ರೋಶಗೊಂಡ ನಾಗವ್ವ ಅವರ ಪೋಷಕರು, ಪತಿಯ ಕಡೆಯ ಸಂಬಂಧಿಕರು ಹಾಗೂ ಬೆಂಬಲಿಗರು ಸೇರಿ ನೂರಾರು ಜನರು ತಳವಾರ, ಜಂಬೆ, ಕುಡಗೋಲು, ಬಡಿಗೆ ಸೇರಿದಂತೆ ವಿವಿಧ ಮಾರಕಾಸ್ತ್ರಗಳೊಂದಿಗೆ ಯಲ್ಲಪ್ಪ ನಾಯಕ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿಕೋರರು ಮನೆಯ ಹಂಚುಗಳನ್ನು ಪುಡಿಗೈದು, ಬಾಗಿಲು-ಕಿಟಕಿಗಳನ್ನು ಧ್ವಂಸಗೊಳಿಸಿದ್ದು, ಅಲ್ಮಾರಿ, ಟಿವಿ ಸೇರಿದಂತೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಮನೆಯೊಳಗಿನ ಬಹುತೇಕ ವಸ್ತುಗಳಿಗೆ ಹಾನಿಯಾಗಿದೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ದಾಳಿಯ ವೇಳೆ ಮನೆಯಲ್ಲಿದ್ದ ಯಲ್ಲಪ್ಪನ ತಂದೆ-ತಾಯಿ ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಲು ಮತ್ತು ಪ್ರಾಣಾಪಾಯ ಉಂಟುಮಾಡಲು ಯತ್ನಿಸಲಾಗಿದೆ. ಆದರೆ ಅವರು ಸ್ಥಳದಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ದಾಳಿ ನಡೆಸಿದ ಗುಂಪು ಮನೆಯಲ್ಲಿ ಇದ್ದ ಚಿನ್ನಾಭರಣ, ನಗದು ಹಣ ಹಾಗೂ ಕೊಟ್ಟಿಗೆಯಲ್ಲಿದ್ದ 25 ಕುರಿಗಳನ್ನು ದೋಚಿಕೊಂಡು ಪರಾರಿಯಾಗಿದೆ ಎಂದು ಸಂತ್ರಸ್ತ ಕುಟುಂಬ ದೂರಿನಲ್ಲಿ ಆರೋಪಿಸಿದೆ.

ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸಂತ್ರಸ್ತ ಕುಟುಂಬವು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ತಮ್ಮ ಆಸ್ತಿ ನಷ್ಟ ಹಾಗೂ ಜೀವ ಬೆದರಿಕೆ ಕುರಿತು ನ್ಯಾಯ ಒದಗಿಸಬೇಕೆಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದಾಳಿ, ಆಸ್ತಿ ಹಾನಿ, ದರೋಡೆ ಹಾಗೂ ಇತರ ಆರೋಪಗಳ ಕುರಿತು ತನಿಖೆ ಆರಂಭಿಸಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ