LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಜೆಪಿ ಶಾಸಕನಿಗೆ ಜಾಮೀನು; ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ

ಹೈದರಾಬಾದ : ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್​​ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮುಸ್ಲಿಂ ಸಮುದಾಯದ ಆಕ್ರೋಶ ಮುಗಿಲುಮುಟ್ಟಿದೆ. ರಾಜಾ ಸಿಂಗ್​​ಗೆ ಜಾಮೀನು ಸಿಕ್ಕಿರುವುದನ್ನು ವಿರೋಧಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಲಾಗಿದೆ.



ಪ್ರತಿಭಟನೆಯ ಸಂದರ್ಭದಲ್ಲಿ ತಲೆಯನ್ನು ದೇಹದಿಂದ ಬೇರ್ಪಡಿಸಿ ಎಂಬ ಘೋಷಣೆಗಳು ಮೊಳಗುತ್ತಲೇ ಇದ್ದವು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸಾಕಷ್ಟು ಯತ್ನಿಸಿದರು. ಈ ಸಂದರ್ಭದಲ್ಲಿ ಸಬ್​ ಇನ್​ಸ್ಪೆಕ್ಟರ​ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.



ಸಿಆರ್​​ಪಿಸಿ ಸೆಕ್ಷನ್​ 41(ಎ) ಅಡಿಯಲ್ಲಿ ಯಾವುದೇ ನೋಟಿಸ​​ ಶಾಸಕ ರಾಜಾ ಸಿಂಗ್​​ ಅವರಿಗೆ ನೀಡಲಾಗಿಲ್ಲ ಎಂದು ರಾಜಾ ಸಿಂಗ್​ ಪರ ವಕೀಲರು ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕೋರ್ಟ​ ಎದುರು ವಾದಿಸಿದರು. ವಕೀಲರ ಈ ವಾದವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಜಾಮೀನನ್ನು ನೀಡಿತ್ತು.



ಜಾಮೀನು ದೊರಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ತೆಲಂಗಾಣದಾದ್ಯಂತ ಪ್ರತಿಭಟನೆಗಳು ಮಿತಿಮೀರಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.



ಅಂಬರ​ಪೇಟ​​, ತಲಬಕಟ್ಟಾ, ಮೊಗಲ​​ಪುರ, ಖಿಲ್ವತ್​, ಬಹದ್ದೂರ್​ಪುರ ಹಾಗೂ ಚಂಚಲಗುಡಾದಲ್ಲಿ ರಾಜಾ ಸಿಂಗ್​​​ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಪ್ರತಿಭಟನಾಕಾರರು ಕೋರ್ಟ್​ನ ಆದೇಶವನ್ನು ವಿರೋಧಿಸಿ ಬರ್ಕಾಸ್​ನಿಂದ ಚಂದ್ರಾಯನಗುಟ್ಟದವರೆಗೆ ಮೆರವಣಿಗೆ ನಡೆಸಿದರು.



ಹೈದರಾಬಾದ​ನ ಶಾಲಿಬಂಡಾದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಪ್ರತಿಭಟನಾಕಾರರು ಪೊಲೀಸ್​ ವ್ಯಾನ್​ ಧ್ವಂಸಗೊಳಿಸಿದ್ದಾರೆ. ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು ಮಾತ್ರವಲ್ಲದೇ ರಾಜಾ ಸಿಂಗ್​ ಪೋಸ್ಟರ್​​ಗೆ ಚಪ್ಪಲಿಯಿಂದ ಹೊಡೆದು ಅವರ ಪ್ರತಿಕೃತಿ ದಹಿಸಿದ್ದಾರೆ.



ನೂಪುರ್ ಶರ್ಮಾ ಬೆನ್ನಲ್ಲೇ ತೆಲಂಗಾಣದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರು​ ಪ್ರವಾದಿ ಮೊಹಮ್ಮದ ಪೈಗಂಬರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಈಡಾಗಿದ್ದಾರೆ. ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಅಡಿಯಲ್ಲಿ ರಾಜಾ ಸಿಂಗ್​​ರನ್ನು ಬಂಧಿಸಲಾಗಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ