LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದೀಪಾವಳಿ ಹಬ್ಬ ಕಳೆದ ನಂತರ ಬೇಕಿಂಗ್ ಸುದ್ದಿ ಕೊಡುವುದಾಗಿ ಹೇಳಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ದೀಪಾವಳಿ ನಂತರ ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ಬೆಮುಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.



ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಗೆ ತಮ್ಮ ಬಣದ ಏಳು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಂತರ ಅವರು ಪತ್ರಕರ್ತರ ಜೊತೆ ಮಾತನಾಡಿದರು.



ನಮ್ಮನ್ನು ಹಾಗೂ ಜಾರಕಿಹೊಳಿ ಕುಟುಂಬವನ್ನು ಟೀಕಿಸುವವರಿಗೆ ಕಾನೂನು ಮೂಲಕ ಉತ್ತರ ಕೊಡುತ್ತೇವೆ. 20 ದಿನಗಳಿಂದ ನಮ್ಮ ವಿರುದ್ಧ ಬಹಳ ಮಾತನಾಡಿದ್ದಾರೆ. ನಾವು ನಿಂದಿಸುವುದಿಲ್ಲ. ಎಲ್ಲವನ್ನೂ ಕೇಳಿ ಸುಮ್ಮನಿದ್ದೇವೆ. ಆದರೆ ಇನ್ನೂ ಸುಮ್ಮನಿರುವುದಿಲ್ಲ. ಕಾನೂನು ಮೂಲಕ ಪ್ರತ್ಯುತ್ತರ ಕೊಡುತ್ತೇವೆ. ನಮ್ಮ ಕುಟುಂಬ ಮಾತ್ರವಲ್ಲ, ನಮ್ಮ ಪೆನಲ್ ಸದಸ್ಯರು ಕಾನೂನು ಸಮರಕ್ಕೆ ಮುಂದಾಗಲಿದ್ದಾರೆ. ಜಾರಕಿಹೊಳಿ ಕುಟುಂಬದ ಬಗ್ಗೆ ವೈಯಕ್ತಿಕ ತೇಜೋವಧೆ ಮಾಡುವವರ ಕುರಿತು ಏನು ಹೇಳುವುದಿಲ್ಲ. ದೀಪಾವಳಿ ನಂತರ ಕಾನೂನು ಹೋರಾಟ ನಡೆಯಲಿದ್ದು ಆಗ ಬ್ರೇಕಿಂಗ್ ಸುದ್ದಿ ಕೊಡುತ್ತೇವೆ ಎಂದು ಅವರು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಚುನಾವಣೆ ಕಾಲಕ್ಕೆ ನಡೆದ ಎದುರಾಳಿಗಳ ಆರೋಪಕ್ಕೆ ಸೂಕ್ತ ಉತ್ತರ ನೀಡುವುದಾಗಿ ಸಂದೇಶ ರವಾನಿಸಿದ್ದಾರೆ.



ಹಾಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರು ಆಗಿರುವ ಮಾಜಿ ಸಂಸದ ರಮೇಶ ಕತ್ತಿ ಅವರು ಬುಧವಾರ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಂತೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಾವು ಚುನಾವಣೆಯನ್ನು ಎದುರಿಸುತ್ತೇವೆ. ಇಲ್ಲಿಯೂ ನಾವು ಕುದುರೆ ಹೂಡುತ್ತೇವೆ. ಅವರು ಹಿಡಿದು ಕಟ್ಟಿಹಾಕಲಿ ನೋಡೋಣ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಾಲಚಂದ್ರ ಜಾರಕಿಹೊಳಿ ಅವರು, ಚುನಾವಣೆ ಎಂದ ಮೇಲೆ ಸ್ಪರ್ಧೆ ಇದ್ದೇ ಇರುತ್ತದೆ. ಅವರು ಕುದುರೆ ಕಟ್ಟಿ ಹಾಕುತ್ತೇನೆ ಎಂದರೆ ಕಟ್ಟಿ ಹಾಕಲಿ. ಅವರಿಗೆ ಬೇಡ ಎಂದವರು ಯಾರು? ನಾವು ಸಹ ಕುದುರೆಯನ್ನು ಹೂಡುವ ಪ್ರಯತ್ನ ಮಾಡುತ್ತೇವೆ. ಅದನ್ನು ಕಟ್ಟಿ ಹಾಕುವ ಪ್ರಯತ್ನ ಅವರು ಮಾಡಲಿ ಎಂದು ತಿರುಗೇಟು ನೀಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು