LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅನಧಿಕೃತ ಶಿವಾಜಿ ಪ್ರತಿಮೆ ತೆರವು; ಬಾಗಲಕೋಟದಲ್ಲಿ ನಿಷೇಧಾಜ್ಞೆ

ಬಾಗಲಕೋಟ, 17- ಬಾಗಲಕೋಟ ನಗರದಲ್ಲಿ ಅನುಮತಿಯಿಲ್ಲದೇ ಸ್ಥಾಪಿಸಲಾಗಿದ್ದ ಶಿವಾಜಿ ಪ್ರತಿಮೆಯನ್ನು ಜಿಲ್ಲಾಡಳಿತ ಬುಧವಾರ ರಾತ್ರಿ ತೆರವುಗೊಳಿಸಿದೆ. ಇದನ್ನು ಪ್ರತಿಭಟಿಸಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದು ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ.



ಬಾಗಲಕೋಟ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಭಾರತೀಯ ದಂಡ ಸಂಹಿತೆ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಆದೇಶ ಹೊರಡಿಸಿದ್ದಾರೆ.



ನಗರದ ಲಯನ್ಸ‌ ವೃತ್ತದಲ್ಲಿ ಅನುಮತಿಯಿಲ್ಲದೇ ಏಕಾಏಕಿ ಶಿವಾಜಿ ಪ್ರತಿಮೆ ಸ್ಥಾಪನೆ ಮಾಡಲಾಗಿತ್ತು ಎನ್ನಲಾಗಿದೆ. ಅದನ್ನು ಬುಧವಾರ ರಾತ್ರಿ ತೆರವುಗೊಳಿಸಲಾಗಿದ್ದು ಇದನ್ನು ಪ್ರತಿಭಟಿಸಿ ಗುರುವಾರ ಬಿಜೆಪಿ ಮುಖಂಡರಾದ ನಾರಾಯಣ ಭಾಂಡೆಗೆ, ರಾಜು ನಾಯ್ಕರ, ಬಸವರಾಜ ಯಂಕಂಚಿ ಹಾಗೂ ಸಂಘ ಪರಿವಾರದ ಹಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.



ಅನಧಿಕೃತ ಪ್ರತಿಮೆ ಇದ್ದ ಸ್ಥಳದಲ್ಲಿ ಬಿಗಿ ಬಂದೋಬಸ್ತ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ ಅವರು ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.



ಯಾವುದೇ ಅನುಮತಿ ಇಲ್ಲದೇ ಶಿವಾಜಿ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಲಾಗಿತ್ತು. ಆದ್ದರಿಂದ ಅದನ್ನು ತೆರವುಗೊಳಿಸಲಾಗಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಗಸ್ಟ‌ 18ರ ವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ ಜಾನಕಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ