LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಾಂಕ್ರಾಮಿಕದಿಂದ ಬೆಳಗಾವಿ ಮೃಗಾಲಯದ ಕೃಷ್ಣ ಮೃಗಗಳು ಅಸು ನೀಗಿರುವ ಶಂಕೆ

ಬೆಳಗಾವಿ: ಬೆಳಗಾವಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಒಟ್ಟು 31 ಕೃಷ್ಣಮೃಗಗಳು ಮೃತಪಟ್ಟಿದ್ದು, ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗದಿಂದಾಗಿರಬಹುದು ಎಂದು ಆತಂಕ ವ್ಯಕ್ತವಾಗಿದೆ.ಇದು ಕೊರೊನಾ ಮಾದರಿಯ ರೋಗ ಆಗಿರಬಹುದು ಎಂದು ಅರಣ್ಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.



ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡದ ಅವರು, ಅರಣ್ಯ ಅಧಿಕಾರಿಗಳು ಈಗಾಗಲೇ ಕೃಷ್ಣಮೃಗಗಳ ಸಾವಿನ ಸ್ಥಳಕ್ಕೆ ಭೇಟಿ ನೀಡಿದ್ದು, ವರದಿ ಬರಬೇಕಿದೆ. ರೋಗ ಬಂದಿರಬಹುದು ಎಂಬ ಆತಂಕ ಇದೆ. ಇಂದು ಬೆಂಗಳೂರಿನ ಬನ್ನೇರುಘಟ್ಟದಿಂದ ನುರಿತ ವೈದ್ಯರು ಬಂದಿದ್ದಾರೆ. ವೈದ್ಯರು ವರದಿ ನೀಡಿದ ಬಳಿಕ ಸರ್ಕಾರ ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದರು.



ಸದ್ಯ ಒಂದೇ ಕಡೆ ಮಾತ್ರ ಈ ಸಾವುಗಳು ಸಂಭವಿಸಿವೆ. ವರದಿ ಬಂದ ಬಳಿಕ ಜಿಲ್ಲಾಡಳಿತ ಮತ್ತು ಇಲಾಖೆ ವತಿಯಿಂದ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ. ಮೊನ್ನೆಯೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದೊಂದು ಹೊಸ ರೋಗ ಆಗಿದ್ದು, ಅದನ್ನು ಕಂಡುಹಿಡಿಯಲು ಕಷ್ಟವಾಗಬಹುದು ಎಂದು ತಿಳಿಸಿದರು.



ಅರಣ್ಯ ಇಲಾಖೆ ನಿಗಮದ ಅಧ್ಯಕ್ಷರೊಂದಿಗೆ ಕೃಷ್ಣಮೃಗಗಳ ಅಕಾಲಿಕ ಮರಣದ ಕುರಿತು ಈಗಾಗಲೇ ಚರ್ಚೆ ನಡೆಸಲಾಗಿದೆ. ಅಧ್ಯಕ್ಷರು ಬಂದ ಮೇಲೆ ಸಂಜೆ ಮೃಗಾಲಯಕ್ಕೆ ಭೇಟಿ ನೀಡುವುದಾಗಿ ಸಚಿವರು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ