LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿ ರಿಂಗ್‌ ರೋಡ್‌ ೯೧೨ ದಿನಗಳಲ್ಲಿ ಪೂರ್ಣಗೊಳಿಸಲು ಗಡುವು

ಬೆಳಗಾವಿ: ಒಂದೆರಡು ದಶಕಗಳ ಹಿಂದೆಯೇ ಆಗಿ ಹೋಗಬೇಕಿದ್ದ ಬೆಳಗಾವಿ ಜನರ ಬಹುಬೇಡಿಕೆಯ ಬೈಪಾಸ್ ರಿಂಗ್‌ ರೋಡ್  ನಿರ್ಮಾಣಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜಿಆರ್ ಇನಫ್ರಾ ಪ್ರಾಜೆಕ್ಟ್ಸ ಕಂಪನಿಗೆ ಗುತ್ತಿಗೆ ನೀಡಿದ್ದು, 912 ದಿನಗಳಲ್ಲಿ ಯೋಜನೆಯ ಕೆಲಸವನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ.



ದಿನೇ ದಿನೇ ತೀವ್ರ ರಸ್ತೆ ಸಂಚಾರ ಸಮಸ್ಯೆಯಿಂದ ನಲುಗುತ್ತಿರುವ ಬೆಳಗಾವಿ ನಗರದ ವರ್ತುಲ ರಸ್ತೆಯ ಕೆಲಸ ಒಂದೆರಡು  ದಶಕಗಳ ಹಿಂದೆಯೇ ಆಗಬೇಕಿತ್ತು. ದಶಕಗಳಿಂದ ನಮ್ಮ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು  ಈ ಯೋಜನೆಯನ್ನು ಮಾಡಿ ಮುಗಿಸದೇ ನೆನೆಗುದಿಗೆ ಬೀಳಿಸಿಕೊಂಡು ಬಂದಿದ್ದರು. ಈಗ ತೀವ್ರ ಟ್ರಾಫಿಕ್‌ ಸಮಸ್ಯೆ ಆಗುತ್ತಿರುವ ಕಾರಣ ಯೋಜನೆಗೆ ಯತ್ನಿಸಲಾಗುತ್ತಿದೆ. ಜಮೀನುಗಳಿಗೆ ಬಂಗಾರದ ಬೇಡಿಕೆ ಬಂದಿರುವ ಈ ಸಮಯದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದರಿಂದ ಸಹಜವಾಗಿ ರೈತರಿಂದ ತೀವ್ರ ವಿರೋಧ ಕಂಡು ಬರುತ್ತಿದೆ. ಇಂದಿನ ಈ ಸಮಸ್ಯೆಗೆ ನಮ್ಮ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಮತ್ತು ಉತ್ತರ ಕರ್ನಾಟಕದ ಬಗೆಗಿನ ಸರ್ಕಾರಗಳ ಮಲತಾಯಿ ಧೋರಣೆಗಳೇ ಮುಖ್ಯ ಕಾರಣವಾಗಿದ್ದು ಇದರಿಂದಾಗಿ ವರ್ತುಲ ರಸ್ತೆಯ ಕೆಲಸ ಇನ್ನೂ ಡೋಲಾಯಮಾನ ಸ್ಥಿತಿಯಲ್ಲಿಯೇ ಇದೆ.



4/6 ಲೇನ್ ವರ್ತುಲ ರಸ್ತೆ ಕಾಮಗಾರಿ ಗುತ್ತಿಗೆ ನೀಡಲು ಪ್ರಾಧಿಕಾರವು 1,083.45 ಕೋಟಿ ರೂ.ಗಳ ಟೆಂಡರ್‌ ಕರೆದಿತ್ತು. ಆರು ಕಂಪನಿಗಳು ಟೆಂಡರ್‌ಗಳನ್ನು ಸಲ್ಲಿಸಿದ್ದವಾದರೂ ಅದರಲ್ಲಿ ಜಿಆರ್ ಇನ್‌ಫ್ರಾ ಲಿಮಿಟೆಡ್‌ಗೆ ಸೇರಿದ 897 ಕೋಟಿ 37 ಲಕ್ಷ ರೂ.ಗಳ ಟೆಂಡರ್ ಅರ್ಜಿ ಆಯ್ಕೆಯಾಗಿದೆ.



ಈ ಯೋಜನೆಗಾಗಿ 31 ಹಳ್ಳಿಗಳ ರೈತರ ಸುಮಾರು 1,272 ಎಕರೆ ಭೂಮಿ ಬೇಕಾಗಲಿದೆ. ಪ್ರಸ್ತಾವಿತ ಬೆಳಗಾವಿಯ ಬೈಪಾಸ್‌ ವರ್ತುಲ ರಸ್ತೆ ಯೋಜನೆ ಜಾರಿಯಾದರೆ ಅಗಸಗೆ, ಅಂಬೇವಾಡಿ, ಬಾಚಿ, ಭಾದರವಾಡಿ, ಬೆಳಗುಂದಿ, ಬಿಜಗರ್ಣಿ, ಗೊಜಗೆ, ಹೊಂಗ, ಕಡೋಲಿ, ಕಾಕತಿ, ಕಲಕಂಬ, ಕಲ್ಲೇಹೊಳ, ಕಾಮಕರಟ್ಟಿ, ಕಣಬರ್ಗಿ, ಕೊಂಡಸಕೊಪ್ಪ, ಮಣ್ಣೂರ ಮತ್ತಿತರ ಗ್ರಾಮಗಳ ರೈತರ ಭೂಮಿ ಹೋಗುತ್ತದೆ ಎನ್ನಲಾಗಿದೆ.



ಶೀಘ್ರದಲ್ಲೇ ವರ್ತುಲ ರಸ್ತೆ ಯೋಜನೆ ಕಾಮಗಾರಿಯನ್ನು ಪ್ರಾರಂಭಿಸಲಿದೆ ಎಂಬ ಸುದ್ದಿ ತಿಳಿದು ರೈತರು ಮತ್ತೆ ಆಂದೋಲನ ಪ್ರಾರಂಭಿಸಲು ಸಜ್ಜಾಗಿದ್ದು ರೈತರ ಫಲವತ್ತಾದ ಭೂಮಿಯನ್ನು ಉಳಿಸಲು ಮೇಲ್ಸೇತುವೆ ಸ್ಥಾಪನೆಯಂತಹ ಆಯ್ಕೆಗಳು ಸರ್ಕಾರಕ್ಕೆ ಇವೆ ಎಂದು ಹೇಳುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ