LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮನೆ ಬಾಗಿಲಿಗೇ ಜನನ, ಮರಣ ಪ್ರಮಾಣಪತ್ರ

ಬೆಳಗಾವಿ, ಸೆ. 13 : (ಸಮದರ್ಶಿ ಸುದ್ದಿ) - ಜನನ ಮತ್ತು ಮರಣ ಪ್ರಮಾಣಪತ್ರಕ್ಕಾಗಿ ಮಹಾನಗರ ಪಾಲಿಕೆ ಕಚೇರಿಗೆ ಪದೇ ಪದೇ ಅಲೆದಾಡುವ ಅಗತ್ಯ ಇನ್ನು ಕಡಿಮೆಯಾಗಲಿದೆ. ಸಾರ್ವಜನಿಕರ ಮನೆ ಬಾಗಿಲಿಗೇ ಅಂಚೆ ಮೂಲಕ ಪ್ರಮಾಣಪತ್ರ ತಲುಪಿಸುವ ನೂತನ ವ್ಯವಸ್ಥೆಗೆ ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಅಂಚೆ ಇಲಾಖೆ ಒಡಂಬಡಿಕೆ ಮಾಡಿಕೊಂಡಿವೆ.

ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಹಾಗೂ ಅಂಚೆ ಇಲಾಖೆಯ ಬೆಳಗಾವಿ ವಿಭಾಗದ ಹಿರಿಯ ಅಧೀಕ್ಷಕಿ ಆರುಷಿ ಶರ್ಮಾ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

ಜನನ ಅಥವಾ ಮರಣ ಪ್ರಮಾಣಪತ್ರಕ್ಕಾಗಿ ಪಾಲಿಕೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಂಚೆ ಮೂಲಕ ಪ್ರಮಾಣಪತ್ರ ಪಡೆಯಲು ಇಚ್ಛಿಸುವವರು ತಮ್ಮ ವಿಳಾಸದೊಂದಿಗೆ ಒಪ್ಪಿಗೆ ಪತ್ರ ನೀಡಬೇಕು. ಬಳಿಕ ಪಾಲಿಕೆಯ ಜನನ ಮತ್ತು ಮರಣ ಪ್ರಮಾಣಪತ್ರ ವಿತರಣಾ ವಿಭಾಗವು ಪ್ರಮಾಣಪತ್ರವನ್ನು ಅಂಚೆ ಮೂಲಕ ಅರ್ಜಿದಾರರ ಮನೆಗೆ ಕಳುಹಿಸಲಿದೆ. ನಿಗದಿತ ಅಂಚೆ ಶುಲ್ಕ ಪಾವತಿಸಿ ಸಾರ್ವಜನಿಕರು ತಮ್ಮ ಮನೆ ಬಾಗಿಲಲ್ಲೇ ಪ್ರಮಾಣಪತ್ರ ಪಡೆಯಬಹುದು.

ಈ ವ್ಯವಸ್ಥೆಯಿಂದ ಸಾರ್ವಜನಿಕರ ಸಮಯ ಮತ್ತು ವೆಚ್ಚ ಉಳಿತಾಯವಾಗಲಿದ್ದು, ಪಾಲಿಕೆ ಕಚೇರಿಗೆ ಅನಗತ್ಯವಾಗಿ ಅಲೆದಾಡುವುದೂ ತಪ್ಪಲಿದೆ. ಸಾರ್ವಜನಿಕರು ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಮನವಿ ಮಾಡಿದರು.

ಈ ಸಂದರ್ಭದಲ್ಲಿ ಆರುಷಿ ಶರ್ಮಾ, ಪಾಲಿಕೆಯ ಪರಿಸರ ವಿಭಾಗದ ಅಭಿಯಂತರ, ಜನನ ಮರಣ ನೋಂದಣಾಧಿಕಾರಿ ಅಶೋಕಕುಮಾರ ಸಜ್ಜನ್ ಹಾಗೂ ಅಂಚೆ ಇಲಾಖೆ ಅಧಿಕಾರಿಗಳಾದ ಮಾರುತಿ ದೊಡಮನಿ, ಅನಂತಶಯನ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ: ಅಶೋಕ, ಯದುವೀರ್ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆಗೌರಿ-ಗಣೇಶೋತ್ಸವಕ್ಕೆ ಹಾವೇರಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತಆರೆಸ್ಸೆಸ್ ನೂರು ಸಲ ಹುಟ್ಟಿದರೂ ಬಹುತ್ವ ನಾಶವಾಗದು : ಬಿ.ಕೆ. ಹರಿಪ್ರಸಾದ2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ: ಅಮಿತ ಶಾಯೋಗಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವಗೆ ಬೆದರಿಕೆಬೆದರಿಕೆಗೆ ಬಗ್ಗುವುದಿಲ್ಲ, ಇರಾನ್ ಶರಣಾಗುವುದಿಲ್ಲ: ಪೆಜೆಶ್ಕಿಯನ್ಗಣೇಶ ಮೆರವಣಿಗೆಯಲ್ಲಿ ಅಸಭ್ಯ ವರ್ತನೆ: ಪೊಲೀಸರಿಂದ ಲಾಠಿ ಪ್ರಹಾರಮನೆ ಬಾಗಿಲಿಗೇ ಜನನ, ಮರಣ ಪ್ರಮಾಣಪತ್ರಬ್ರಿಕ್ಸ್ ಯಾರ ವಿರುದ್ಧವೂ ಅಲ್ಲ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ವೇದಿಕೆ: ಮೋದಿಭದ್ರತಾ ಮಂಡಳಿ ಸುಧಾರಣೆಗೆ ಕಾಲಮಿತಿ ನಿಗದಿಯಾಗಲಿ: ಮೋದಿ