LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೂಢನಂಬಿಕೆ ನಾನು ನಂಬುವುದಿಲ್ಲ ಎಂದು ಚಾಮರಾಜನಗರಕ್ಕೆ ಭೇಟಿ ಕೊಟ್ಟ ಬೊಮ್ಮಾಯಿ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದಿರುವುದರಿಂದ ಶುಭ ಸೂಚನೆಯಾಗಿದೆ. ಯಾವುದೇ ಮೂಢನಂಬಿಕೆಗಳನ್ನು ನಾನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.



ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದು ಯಾರೋ ಮೂಢನಂಬಿಕೆ ಬಿತ್ತಿದ್ದಾರೆ. ಇದು ಸುಳ್ಳು. ಎಲ್ಲಾ ಜನಪ್ರತಿನಿಧಿಗಳು ಕೂಡ ಚಾಮರಾಜನಗರಕ್ಕೆ ಭೇಟಿ ಕೊಡಬೇಕು. ಈ ಮೂಲಕ ಒಳ್ಳೆಯ ರೀತಿಯ ಬದಲಾವಣೆಯನ್ನು ಸಮಾಜದಲ್ಲಿ ತರಬೇಕು. ಇಲ್ಲಿನ ಮುಗ್ದ ಜನರ ಮುಖವನ್ನು ನೋಡಿದರೆ ಶಾಪವೂ ಕೂಡ ನಿವಾರಣೆಯಾಗುತ್ತದೆ ಎಂದು ಹೇಳುವ ಮೂಲಕ ಚಾಮರಾಜನಗರಕ್ಕೆ ಭೇಟಿ ನೀಡದ ಹಿಂದಿನ ಮುಖ್ಯಮಂತ್ರಿಗಳಿಗೆ ಟಾಂಗ್ ನೀಡಿದರು.



ನಾನು ಚಾಮರಾಜನಗರಕ್ಕೆ ಮೂರು ಬಾರಿ ಭೇಟಿ ನೀಡಿದ್ದೇನೆ. ಇಲ್ಲಿ ಬಂದ ಮೇಲೆ ರಾಜಕೀಯ ಶಕ್ತಿ ವೃದ್ಧಿಯಾಗಿದೆ. ನನ್ನ ಶಕ್ತಿ ಇಮ್ಮಡಿಯಾಗಿದೆ. ಚಾಮರಾಜನಗರಕ್ಕೆ ಎಷ್ಟು ಬಾರಿ ಕರೆದರೂ ಬರುತ್ತೇನೆ. ಜಿಲ್ಲೆಯ ಅಭಿವೃದ್ಧಿಗಾಗಿ ಏನೇ ಕೇಳಿದರೂ ಸರ್ಕಾರ ಸ್ಪಂದಿಸಲಿದೆ. ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತಿದ್ದೇನೆ. ಜನಶಕ್ತಿ ಗೆಲ್ಲಬೇಕು. ಯಾವ ಟೀಕೆ ಬಂದರೂ ಅಂಜಲ್ಲ, ಅಳುಕಲ್ಲ, ಜಗ್ಗುವುದೂ ಇಲ್ಲ. ಸತ್ಯಮೇವ ಜಯತೆ ಎಂಬುದರಲ್ಲಿ ಬಲವಾದ ನಂಬಿಕೆಯಿದೆ ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ