LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜಾಲತಾಣಗಳು ಶೈಕ್ಷಣಿಕ ಅಭಿವೃದ್ಧಿಗೆ ಪೂರಕ -ಕುಲಪತಿ ರಾಮಚಂದ್ರ ಗೌಡ

ಬೆಳಗಾವಿ, 30- ಜಾಲತಾಣಗಳು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿದ್ದು ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಜಾಲತಾಣದ ಅವಶ್ಯಕತೆ ತುರ್ತಾಗಿತ್ತು. ಅದು ಈಗ ಈಡೇರಿರುವುದರಿಂದ ಮಹಾವಿದ್ಯಾಲಯವು ಹೊರಜಗತ್ತಿಗೆ ತನ್ನನ್ನು ತೆರೆದುಕೊಳ್ಳುತ್ತಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರ ಗೌಡ ಹೇಳಿದರು.



ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಜಾಲತಾಣ (ವೆಬಸೈಟ್) ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದರಿಂದ ಮಹಾವಿದ್ಯಾಲಯಗಳ ಶೈಕ್ಷಣಿಕ ವ್ಯವಸ್ಥೆಗೆ ಇನ್ನಷ್ಟು ಪುಷ್ಟಿ ಸಿಗಲಿದೆ. ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಮಹಾವಿದ್ಯಾಲಯದ ಕುರಿತು ಮಾಹಿತಿ ತಾವಿದ್ದಲ್ಲಿಯೇ ಪಡೆದುಕೊಳ್ಳಬಹುದು. ಈ ಜಾಲತಾಣ ಮಹಾವಿದ್ಯಾಲಯ ಮತ್ತು ಸಮಾಜದ ನಡುವೆ ಕೊಂಡಿಯಾಗಲಿದೆ ಎಂದು ಜಾಲತಾಣದ ಮಹತ್ವದ ಕುರಿತು ವಿವರಿಸಿದರು.



ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವೆ ರಾಜಶ್ರೀ ಜೈನಾಪುರೆ, ಮೌಲ್ಯಮಾಪನ ಕುಲಸಚಿವ ಪ್ರೊ.. ಶಿವಾನಂದ ಗೊರನಾಳೆ, ವಿತ್ತಾಧಿಕಾರಿ ಪ್ರೊ.. ಎಸ್. ಬಿ. ಆಕಾಶ, ವಿವಿಯ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ. ಎಸ್. ಎಂ. ಗಂಗಾಧರಯ್ಯ, ವಿದ್ಯಾರ್ಥಿ ಉದ್ಯೋಗ ಕೋಶದ ಅಧಿಕಾರಿ ಪ್ರೊ. ಆರ್. ಎನ್. ಮನಗೂಳಿ, ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಮುಕುಂದ ಮುಂಡರಗಿ, ಜಾಲತಾಣದ ನಿರ್ವಹಣಾಧಿಕಾರಿ ಡಾ. ಬಾಲಾಜಿ ಆಳಂದೆ, ಡಾ. ಮಹಾಂತೇಶ ಕುರಿ, ತಾಂತ್ರಿಕ ಸಲಹೆಗಾರ ಸಂತೋಷ ರಜಪೂತ, ಚೇತನ್ ಗಂಗಾಯಿ ಹಾಗೂ ವಿಶ್ವವಿದ್ಯಾಲಯ ಮತ್ತು ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್ ಎಸ್ ತೇರದಾಳ ಸ್ವಾಗತಿಸಿದರು, ಡಾ. ಜ್ಯೋತಿ ಪಾಟೀಲ ನಿರೂಪಿಸಿದರು, ಡಾ. ಅರ್ಜುನ ಜಂಬಗಿ ವಂದಿಸಿದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು