LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಮೇಶ ಕತ್ತಿ ಗೆಲ್ಲುವ ಸಾಧ್ಯತೆ ಕಡಿಮೆ; ಕೋರೆ ಅಭಿಮತ

ಚಿಕ್ಕೋಡಿ : ರಾಜ್ಯದ ಹಿರಿಯ ರಾಜಕಾರಣಿ, ಬಿಜೆಪಿಯ ಪ್ರಭಾಕರ ಕೋರೆ ಅವರು ತಮ್ಮದೇ ತಾಲ್ಲೂಕು ಚಿಕ್ಕೋಡಿಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ, ಮಾಜಿ ಸಂಸದ ರಮೇಶ ಕತ್ತಿಯವರ ಗೆಲುವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.



ರಮೇಶ ಗೆಲುವು ಕಠಿಣ. ಅವರ ಪ್ರತಿಸ್ಪರ್ಧಿ ಗಣೇಶ ಹುಕ್ಕೇರಿ ಅವರು ಕ್ಷೇತ್ರದಲ್ಲಿ ತುಂಬಾ ಕೆಲಸ ಮಾಡಿದ್ದಾರೆ. ಹಾಗಾಗಿ ಬಿಜೆಪಿಗೆ ಕ್ಷೇತ್ರ ಒಲಿಯುವ ಸಾಧ್ಯತೆ ಕಡಿಮೆ ಎಂದು ಕೋರೆ ಪತ್ರಕರ್ತರಿಗೆ ತಿಳಿಸಿದರು.



ಗಣೇಶ ಹುಕ್ಕೇರಿಯವರ ತಂದೆ, ಮಾಜಿ ಸಂಸದ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು 24X7 ರಾಜಕಾರಣಿ. ಸರಕಾರ ಯಾವುದೇ ಇರಲಿ ತಮ್ಮ ಕ್ಷೇತ್ರದ ಕೆಲಸ ಮಾಡಿಸಿಕೊಳ್ಳುತ್ತಾರೆ. ಹಾಗಾಗಿ ರಮೇಶ ಕತ್ತಿಗೆ ಅವಕಾಶ ಕಡಿಮೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರೂ ಆಗಿರುವ ಕೋರೆ ತಿಳಿಸಿದರು.



ತಮ್ಮ ಅಭಿಪ್ರಾಯ ವಿವಾದಕ್ಕೆ ಆಸ್ಪದವಾಗಬಾರದೆಂದು "ರಮೇಶ ಕತ್ತಿಯವರ ಗೆಲ್ಲುವ ಸಾಧ್ಯತೆ 50:50 ಇದೆ" ಎಂದು ಕೋರೆ ನಂತರ ಸಮಜಾಯಿಸಿಕೊಂಡರು.



ಆದರೆ, ದಿ. ಉಮೇಶ ಕತ್ತಿಯವರ ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧೆಸಿರುವ ಅವರ ಪುತ್ರ ನಿಖಿಲ ಕತ್ತಿಯವರು ಅನುಕಂಪದ ಮೇಲೆ ಮಾತ್ರವಲ್ಲ, ತಮ್ಮ ವೈಯುಕ್ತಿಕ ವರ್ಚಸ್ಸು, ವಿದ್ಯಾರ್ಹತೆ, ಜನರೊಂದಿಗೆ ಉತ್ತಮ ಬಾಂಧವ್ಯದ ಮೂಲಕ ಕ್ಷೇತ್ರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕೋರೆ ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು