LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪೊಲೀಸ್ ವಶದಲ್ಲಿದ್ದ ವ್ಯಕ್ತಿಯ ಸಾವಿನ ತನಿಖೆ ಸಿಐಡಿಗೆ

ಬೆಳಗಾವಿ : ಗಾಂಜಾ ಹೊಂದಿದ್ದ ಆರೋಪದ ಮೇಲೆ ವಿಚಾರಣೆಗೆಂದು ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವನಪ್ಪಿದ್ದು ಪ್ರಕರಣದ ತನಿಖೆಯನ್ನು ಸಿಅಯ್ ಡಿ ಗೆ ಒಪ್ಪಿಸಲಾಗಿದೆ.



ಬೆಳಗಾವಿ ಗ್ರಾಮೀಣ ಪೊಲೀಸರು ಗಾಂಜಾ ಹಿಂದಿದ್ದ ಆರೋಪದ ಮೇಲೆ ಬೆಲ್ಲದ ಬಾಗೇವಾಡಿ ಗ್ರಾಮದ 45 ವರುಷದ ಬಸನಗೌಡ ಈರನಗೌಡ ಪಾಟೀಲ ಎಂಬವರನ್ನು ವಿಚಾರಣೆಗೆಂದು ಶುಕ್ರವಾರ ಸಂಜೆ ವಶಕ್ಕೆ ಪಡೆದಿದ್ದರು. ಮಾರ್ಗ ಮಧ್ಯೆ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಕಾಕತಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಿ ಸುಧಾರಿಸಿದ ನಂತರ ಕಾಕತಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡುವಾಗ ಅವರು ಪುನಃ ತೀವ್ರ ಅಸ್ವಸ್ಥಗೊಂಡರು. ರಾತ್ರಿ ಸುಮಾರು 10.30 ಗಂಟೆಗೆ ಅವರನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತು ಸುಮಾರು 11.30ರ ವೇಳೆ ಅವರು ಅಸುನೀಗಿದರು.



ಈ ಕುರಿತು ಮಾಹಿತಿ ನೀಡಿರುವ ಡಿಎಸ್ ಪಿ ರವೀಂದ್ರ ಗಡಾದಿ ಅವರು ಬಹುಷಃ ಹೃದಯಾಘಾತದಿಂದ ಅವರು ಅಸುನೀಗಿರುವ ಸಾಧ್ಯತೆಯಿದ್ದು ಮರಣೋತ್ತರ ವರದಿಗಾಗಿ ಕಾಯುತ್ತಿರುವದಾಗಿ ತಿಳಿಸಿದರು.



ಮೃತರ ಪತ್ನಿ ನೀಡಿದ ದೂರು ಆಧರಿಸಿ, ಪೊಲೀಸ  ವಶದಲ್ಲಿದ್ದ ವ್ಯಕ್ತಿ ಸತ್ತಿದ್ದರಿಂದ ಪ್ರಕರಣದ ತನಿಖೆಯನ್ನು ಸಿಆಯ್ ಡಿ ಗೆ ನೀಡಲಾಗಿದೆ ಎಂದು ತಿಳಿಸಿದರು.



ಆದರೆ ಸತ್ಯಾಸತ್ಯತೆಗೆ ಆಗ್ರಹಿಸಿರುವ ಬೆಳಗಾವಿ ಆಮ್ ಆದ್ಮಿ ಪಾರ್ಟಿ (ಆಪ್) ಸಿಅಯ್ ಡಿ ತನಿಖೆ ಬದಲು ಸಿಬಿಅಯ್ ತನಿಖೆಗೆ ಒತ್ತಾಯಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ