ಹೊಸದಿಲ್ಲಿ, ಜುಲೈ 20: ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಸಿಜೆಪಿ ಸಂಸ್ಥಾಪಕ ಅಭಿಜೀತ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಕ್ಷ ಆರೋಪಿಸಿದೆ. ಪ್ರತಿಭಟನೆಯ ನಡುವೆ ಪೊಲೀಸರು ಬಲಪ್ರಯೋಗ ನಡೆಸಿ ಅವರನ್ನು ಕರೆದೊಯ್ದಿದ್ದಾರೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.
"ಅಭಿಜೀತ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ದೇಶದ ಎಲ್ಲ ಸಂಸದರು ಬೆಂಬಲವಾಗಿ ನಿಲ್ಲಬೇಕು" ಎಂದು ಅವರು ಮನವಿ ಮಾಡಿದ್ದಾರೆ. ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲೂ ಅಭಿಜೀತ ಅವರನ್ನು ಜಂತರ್ ಮಂತರ್ನಿಂದ ಪೊಲೀಸರು ಕರೆದೊಯ್ದಿರುವುದಾಗಿ ತಿಳಿಸಲಾಗಿದೆ. ಆದರೆ ಈ ಸಂಬಂಧ ದೆಹಲಿ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.