LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ನಗರದಲ್ಲಿ ಗುಂಪು ಘರ್ಷಣೆ; ಲಾಠಿ ಪ್ರಹಾರ

ಬೆಳಗಾವಿ, ೨೨:  ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡ ಹಿನ್ನಲೆಯಲ್ಲಿ ಬೆಳಗಾವಿ ನಗರದಲ್ಲಿ ಜರುಗಿದ ಸಂಭ್ರಮಾಚರಣೆಯೊಂದರ ಸಮಯದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪನ್ನು ಚದುರಿಸಿದ ಘಟನೆ ನಡೆದಿದೆ.



ಸೋಮವಾರ ತಡರಾತ್ರಿ ಹಿಂದೂ ಯುವಕರ ಗುಂಪೊಂದು ಜೈ ಶ್ರೀರಾಮ ಘೋಷಣೆಯೊಂದಿಗೆ ಖಡೇಬಜಾರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಟೀಲ ಮಾಳಾ ಬಳಿ ತಿರುಗುತ್ತಿತ್ತು. ಈ ಪ್ರದೇಶದಲ್ಲಿ ಮಸೀದಿಯೊಂದಿದ್ದು ಹೆಚ್ಚಿನ ಪೊಲೀಸ್ ಭದ್ರತೆಗೆ ನಿಯೋಜನೆಗೊಂಡಿದ್ದರು. ಪೊಲೀಸರು ಸೂಚನೆ ನೀಡಿದ್ದರೂ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಗುಂಪು ಘೋಷಣೆ ಕೂಗುತ್ತ ಆ ಪ್ರದೇಶದಲ್ಲಿಯೇ ಸುತ್ತಾಡುತ್ತಿತ್ತು. ಈ ನಡುವೆ ಮೆರವಣಿಗೆ ನಡೆಸಿದವರ ಮೇಲೆ ಕಲ್ಲು ತೂರಾಟ ನಡೆಯಿತು, ಇದಕ್ಕುತ್ತರವಾಗಿ ಮೆರವಣಿಗೆ ನಡೆಸಿದ ಗುಂಪೂ ಸಹ ಕಲ್ಲು ತೂರಾಟ ನಡೆಸಿತು. ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದರು.



ಸ್ಥಳದಲ್ಲಿ ಹೆಚ್ಚಿನ ಪೊಲೀಸ ಬಂದೋಬಸ್ತ ನಿಯೋಜಿಸಲಾಗಿದೆ. ಪರಸ್ಥಿತಿ ನಿಯಂತ್ರಣದಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು