LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯಾರ್ಥಿಗಳೊಂದಿಗೆ ಜಿರಳೆಗಳ ಹೋಲಿಕೆ: ಬಿಜೆಪಿ ನಾಯಕನ ಪೋಸ್ಟಗೆ ತೀವ್ರ ಆಕ್ರೋಶ

ಪಣಜಿ, ಜುಲೈ 21: ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ‘ಸಂಸತ್‌ ಚಲೊ’ ಪ್ರತಿಭಟನೆಯನ್ನು ಟೀಕಿಸುವ ಭರದಲ್ಲಿ ಗೋವಾ ಬಿಜೆಪಿ ಹಿರಿಯ ನಾಯಕ ನರೇಂದ್ರ ಸವಾಯ್ಕರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿವಾದಾತ್ಮಕ ಪೋಸ್ಟ್‌ಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸರ್ಕಾರವನ್ನು ಪ್ರಶ್ನಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ‘ಗೆದ್ದಲು’ ಹಾಗೂ ‘ಜಿರಳೆ’ಗಳಿಗೆ ಹೋಲಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ ಎಂದು ಪ್ರತಿಪಕ್ಷಗಳು ಕಿಡಿಕಾರಿವೆ.

ಸವಾಯ್ಕರ್ ಅವರು ಎಕ್ಸ್‌ನಲ್ಲಿ ಭಾರತದ ನಕ್ಷೆಯ ಮೇಲೆಯೇ ಗೆದ್ದಲು ಮತ್ತು ಜಿರಳೆಗಳು ಹರಡಿಕೊಂಡಿರುವಂತೆ ಚಿತ್ರವೊಂದನ್ನು ಹಂಚಿಕೊಂಡಿದ್ದು, ‘ಗೆದ್ದಲುಗಳ ಜತೆ ಜಿರಳೆಗಳು! ದೇಶವನ್ನು ಉಳಿಸಿ!’ ಎಂಬ ಶೀರ್ಷಿಕೆ ನೀಡಿದ್ದರು. ಈ ಪೋಸ್ಟ ವೈರಲ್ ಆಗಿದ್ದು, ವ್ಯಾಪಕ ಟೀಕೆಗೂ ಗುರಿಯಾಗಿದೆ.

ಸರ್ಕಾರದ ನೀತಿಗಳನ್ನು ಪ್ರಶ್ನಿಸುವ ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ದೇಶದ್ರೋಹಿಗಳಂತೆ ಬಿಂಬಿಸುವ ಪ್ರಯತ್ನವೇ ಈ ಪೋಸ್ಟ್‌ನಲ್ಲಿ ಅಡಕವಾಗಿದೆ. ರಾಜಕೀಯ ಭಿನ್ನಾಭಿಪ್ರಾಯವನ್ನು ಕೀಳುಮಟ್ಟದ ಭಾಷೆಯ ಮೂಲಕ ವ್ಯಕ್ತಪಡಿಸುವುದು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ತರುವ ನಡೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಈ ಕುರಿತು ಪ್ರತಿಕ್ರಿಯಿಸಿದ ಗೋವಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸುನಿಲ್ ಕೌತಂಕರ್, ಮುಂದಿನ 24 ಗಂಟೆಗಳೊಳಗೆ ನರೇಂದ್ರ ಸವಾಯ್ಕರ್ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಪ್ರಜಾಸತ್ತಾತ್ಮಕ ಹಕ್ಕು. ಸರ್ಕಾರದ ವಿರುದ್ಧದ ಟೀಕೆಯನ್ನು ದೇಶದ್ರೋಹ ಎಂದು ಬಿಂಬಿಸುವುದು ಬಿಜೆಪಿಯ ಅಪಾಯಕಾರಿ ರಾಜಕೀಯ ಸಂಸ್ಕೃತಿಯಾಗಿದೆ. ಬಿಜೆಪಿ ಎಂದರೆ ದೇಶವಲ್ಲ ಎಂಬುದನ್ನು ಅದರ ನಾಯಕರು ಅರಿಯಬೇಕು ಎಂದು ಅವರು ಕಿಡಿಕಾರಿದರು.

ಆಮ್ ಆದ್ಮಿ ಪಾರ್ಟಿಯ ನಾಯಕ ಕ್ರೂಜ್ ಸಿಲ್ವಾ ಕೂಡ ಸವಾಯ್ಕರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳನ್ನು ‘ಗೆದ್ದಲು’ ಅಥವಾ ‘ಜಿರಳೆ’ಗಳಿಗೆ ಹೋಲಿಸುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಶಾಂತಿಯುತ ಪ್ರತಿಭಟನೆ ನಡೆಸುವವರನ್ನು ಅವಹೇಳನಗೊಳಿಸುವ ಮೂಲಕ ಆಡಳಿತಾರೂಢ ಪಕ್ಷ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿದೆಹಲಿ ಪೊಲೀಸರ ಲಾಠಿ ಪ್ರಹಾರದಲ್ಲಿ ಗಾಯಗೊಂಡ ಯುವತಿ ವೆಂಟಿಲೇಟರ್‌ನಲ್ಲಿ; ಸ್ಥಿತಿ ಗಂಭೀರ