LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಫ್ಯಾಸಿಸ್ಟ ಬಿಜೆಪಿಯನ್ನು ಸೋಲಿಸುವುದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ -ರಾಹುಲ್

ಜೈಪುರ: ಫ್ಯಾಸಿಸ್ಟ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆಎ.



ಶುಕ್ರವಾರ ಕಾಂಗ್ರೆಸ್ ಪಕ್ಷದ ಭಾರತ ಜೋಡೋ ಯಾತ್ರೆ 100 ದಿನ ಪೂರೈಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.



ಕಾಂಗ್ರೆಸ್ ಪಕ್ಷದ ಬಗ್ಗೆ ಯಾರೂ ಅಂಡರ್ ಎಸ್ಟಿಮೇಟ ಮಾಡಬಾರದು. ಕಾಂಗ್ರೆಸ್ ಸೈದ್ಧಾಂತಿಕವಾಗಿ ನಡೆಯುತ್ತಿರುವ ಪಕ್ಷ. ಬಿಜೆಪಿ ವಿರುದ್ಧ ಹೋರಾಡಲು ಸಿದ್ಧವಿಲ್ಲದವರು ಮತ್ತು ಭ್ರಷ್ಟರು ಎಂಬ ಕಾರಣಕ್ಕೆ ಒತ್ತಡಕ್ಕೆ ಮಣಿಯುವವರು ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಪಕ್ಷ ತೊರೆಯಲು ಬಯಸುವವರಿಗೆ ಬಾಗಿಲು ತೆರೆದಿದೆ ಎಂದಿದ್ದಾರೆ.



ಬಹಳಷ್ಟು ಜನ ಕಾಂಗ್ರೆಸ್ ಪಕ್ಷದ ಕಥೆ ಮುಗಿದು ಹೋಗಿದೆ ಎಂದು ಭಾವಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಮುಗಿಸಲು ಸಾಧ್ಯವಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ಕಾಂಗ್ರೆಸ್ ಪಕ್ಷವೇ ಕಿತ್ತೊಗೆಯಲಿದೆ ಎಂದು ಅವರು ಹೇಳಿದರು.



ಕಾಂಗ್ರೆಸ್ ಅನ್ನು ಯಾರೂ ಕಡಿಮೆ ಅಂದಾಜು ಮಾಡಬಾರದು ಎಂದು ಹೇಳಿದ ರಾಹುಲ್ ಗಾಂಧಿ, ಕೋಟ್ಯಾಂತರ ಪಕ್ಷದ ಕಾರ್ಯಕರ್ತರೇ ಪಕ್ಷದ ಶಕ್ತಿಯಾಗಿದ್ದಾರೆ. ನಾವು ನಮ್ಮ ಕಾರ್ಯಕರ್ತರನ್ನು ಚೆನ್ನಾಗಿ ಬಳಸಿಕೊಂಡರೆ ಮುಂದಿನ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದರು.



ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ ತೊರೆಯುತ್ತಿರುವ ನಾಯಕರ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.



"ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆಯಲು ಬಯಸಿದರೆ, ಬಿಜೆಪಿಯನ್ನು ಎದುರಿಸಲು ಧೈರ್ಯವಿಲ್ಲದಿದ್ದರೆ, ಅವರು ಪಕ್ಷವನ್ನು ತೊರೆಯಬಹುದು. ನಮಗೆ ಅವರು ಬೇಡ, ನಮಗೆ ಕಾಂಗ್ರೆಸ್ ಪಕ್ಷವನ್ನು, ಸಿದ್ಧಾಂತವನ್ನು ನಂಬುವವರು ಬೇಕು. ಬಿಜೆಪಿ ಫ್ಯಾಸಿಸ್ಟ ಪಕ್ಷ ಎಂದು ರಾಹುಲ್ ನುಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ