LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆಗಾಗ ದಾಳಿ ನಡೆಸುವುದಕ್ಕಿಂತ ಇಡಿ, ಸಿಬಿಐ ಶಾಖೆಗಳನ್ನು ಡಿಕೆಶಿ ಮನೆಯಲ್ಲಿ ತೆರೆಯಿರಿ -ಕಾಂಗ್ರೆಸ್

ಬೆಳಗಾವಿ : ಆಗಾಗ ದಾಳಿ ಮಾಡುವದಕ್ಕಿಂತ ಬಿಜೆಪಿ ಪಕ್ಷವು ಇಡಿ, ಸಿಬಿಐ ಶಾಖೆಗಳನ್ನು ಡಿ.ಕೆ. ಶಿವಕುಮಾರ ಅವರ ಮನೆ ಮತ್ತು ವ್ಯವಹಾರ ಕೇಂದ್ರಗಳಲ್ಲೇ ಶಾಖೆಗಳನ್ನು ಪ್ರಾರಂಭಿಸಿದರೆ ಸೂಕ್ತವೆಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.



ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರನದೀಪ ಸಿಂಗ್ ಸುರ್ಜೆವಾಲ ಅವರು ಬೆಳಗಾವಿಯಲ್ಲಿ ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿ, ಇಡಿ, ಆದಾಯ ತೆರಿಗೆ, ಸಿಬಿಐ ಮುಂತಾದವು ಒಂದರ ಮೇಲೊಂದು ಡಿ.ಕೆ. ಶಿವಕುಮಾರ ಅವರ ಮೇಲೆ ದಾಳಿ ಮಾಡುತ್ತಿವೆ, ಅದಕ್ಕೆ ಬದಲು ಅವರ ಮನೆ ಮತ್ತು ವ್ಯವಹಾರ ಸ್ಥಳಗಳಲ್ಲಿ ಒಂದೊಂದು ಶಾಖೆ ಪ್ರಾರಂಭಿಸುವದು ಸೂಕ್ತವೆಂದರು.



ಶಿವಕುಮಾರ ಓರ್ವ ಕಾಂಗ್ರೆಸ್ ಮುಖಂಡ, ದೆಹಲಿಯಿಂದ ಕರ್ನಾಟಕದವರೆಗೂ‌ ಕಾಂಗ್ರೆಸ್ ಪಕ್ಷ ಅವರೊಂದಿಗೆ ನಿಲ್ಲಲಿದೆ ಎಂದೂ ಅವರು ಹೇಳಿದರು.



ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಎಲ್ಲ ವಿಷಯಗಳಲ್ಲಿ ವಿಫಲಗೊಂಡಿದೆ. ಹಲವಾರು ಹಗರಣಗಳಲ್ಲಿ ಸಿಲುಕಿಕೊಂಡಿದೆ. ರಾಜ್ಯದ ಜನರನ್ನು ಎರಡೂ ಕೈ ಗಳಿಂದ ಲೂಟಿ ಹೊಡೆಯುವದರ ಮೂಲಕ ರಾಷ್ಟ್ರದಲ್ಲಿ ಅತ್ಯಂತ ಭ್ರಷ್ಟ ಸರಕಾರವೆಂಬ ಕುಖ್ಯಾತಿ ಹೊಂದಿದೆ. ದೇಶದ ಪ್ರತಿಯೊಬ್ಬರೂ ಕರ್ನಾಟಕವನ್ನು ಕರೆಯುವುದೇ '40% ಕಮಿಷನ್' ಸರಕಾರವೆಂದು ಅವರು ಹೇಳಿದರು.



ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ರಚಿಸಲು ಅಗತ್ಯವಾದ ಬಹುಮತವಿರಲಿಲ್ಲ, ಬೇರೆ ಪಕ್ಷಗಳ ಶಾಸಕರನ್ನು ಸಿಬಿಐ, ಇಡಿ, ಮೊಂತಾದವುಗಳಿಂದ ಹೆದರಿಸಿ, ಅಕ್ರಮವಾಗಿ ಸರಕಾರ ನಡೆಸುತ್ತಿದೆ. ಇದಕ್ಕೆಲ್ಲ ಕರ್ನಾಟಕದ ಮೂಲಕವೇ ದೇಶದ ಜನ ಪಾಠ ಕಲಿಸಲಿದ್ದಾರೆ ಎಂದು ಸುರ್ಜೆವಾಲ್ ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು