LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಈ ಬಾರಿ ಕಪ್ ನಮ್ದೇ ಅಂದ ಬಿಜೆಪಿ, ಕಪ್ ನೀವೇ ಇಟ್ಕೊಳ್ಳಿ, ಸರಕಾರ ನಮ್ದು ಎಂದುತ್ತರಿಸಿದ ಕಾಂಗ್ರೆಸ್

ಬೆಂಗಳೂರು : ಈ ಬಾರಿ ರೆಸಾರ್ಟ ರಾಜಕೀಯ ಆಗುವುದಿಲ್ಲ ಮತ್ತು ಅದೆಲ್ಲ ನಡೆಯುವುದೂ ಇಲ್ಲ. ಮತ ಎಣಿಕೆಗೂ ಮುನ್ನ ಎಲ್ಲ ಪಕ್ಷದವರು ತಮ್ಮ ತಮ್ಮಶಾಸಕರನ್ನು ಹಿಡಿದಿಟ್ಟುಕೊಳ್ತಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ ಹೇಳಿದರು.



ಚುಣಾವಣೆಗೆ ಬಿಜೆಪಿ ಎಷ್ಟೇ ಹಣ ಖರ್ಚು ಮಾಡಿರಬಹುದು, ಪ್ರಚಾರಕ್ಕೆ ಎಷ್ಟೇ ನಾಯಕರನ್ನು ಕರೆಸಿರಬಹುದು. ಆದರೆ ಕಾಂಗ್ರೆಸ್ ಗೆ ಬಹುಮತ ಬರಲಿದೆ ಎಂದರು.



ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ಅಧಿಕಾರ ಹಂಚಿಕೆ, ಸಮಿಶ್ರ ಸರಕಾರ ರಚನೆಯೂ ಇಲ್ಲ. ಕಾಂಗ್ರೆಸ್ ನಿಚ್ಚಳ ಬಹುಮತಗಳನ್ನು ಪಡೆದು ಸರ್ಕಾರ ರಚನೆ ಮಾಡಲಿದೆ ಇದು ತಮ್ಮ ದೃಢ ನಂಬಿಕೆ ಎಂದು ಅವರು ಹೇಳಿದರು.



ಅವರ ಎಷ್ಟೇ ನಂಬರ್ ಬಂದರೂ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಈ ಬಾರಿ ಕಪ್ ನಮ್ಮದೇ ಎಂಬ ಸಚಿವ ಆರ್ ಅಶೋಕ ಅವರ ಹೇಳಿಕೆಗೆ ಅವರು ಪ್ರತಿಕ್ರಯಿಸಿ, “ಆರ್ ಸಿಬಿ ಸ್ಲೋಗನ್ ತರಹಾ ಅಶೋಕ ಅವರೇ ಕಪ್ ಇಟ್ಟುಕೊಳ್ಳಲಿ. ನಾವು ಸರ್ಕಾರ ಇಟ್ಟುಕೊಳ್ಳುತ್ತೇವೆ. ಜನಪರ ಆಡಳಿತ ನೀಡುತ್ತೇವೆ" ಎಂದು ಡಿಕೆಶಿ ಉತ್ತರಿಸಿದರು.



ಚುನಾವಣ್ಣೋತ್ತರ ಸಮೀಕ್ಷೆ ಕುರಿತು ಮಾತನಾಡಿದ ಶಿವಕುಮಾರ, ಎಕ್ಸಿಟ್ ಪೋಲ್ ಬಗ್ಗೆ ನನಗೆ ನಂಬಿಕೆಯಿಲ್ಲ. ಕಾಂಗ್ರೆಸ್ ಪರವಾಗಿ ವರದಿ ಬಂದಿರುವುದಕ್ಕೆ ಸಂತೋಷ. ನನ್ನ ನಂಬಿಕೆ 141 ಸ್ಥಾನಗಳು. ಈ ಬಾರಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.



ದಿನೇಶ ಗುಂಡೂರಾವ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಧಿ ಮುಕ್ತಾಯವಾದಾಗ ಸೋನಿಯಾ ಗಾಂಧಿಯವರು ನನಗೆ ಜವಾಬ್ದಾರಿ ಕೊಟ್ಟರು. ನಾನು ಜವಾಬ್ದಾರಿ ಪಡೆದ ಬಳಿಕ ಒಂದು ದಿನವೂ ವಿಶ್ರಾಂತಿ ಪಡೆದಿಲ್ಲ, ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಒಂದು ದಿನವೂ ಮಲಗಿಲ್ಲ, ಮಲಗಲೂ ಬಿಟ್ಟಿಲ್ಲ. ಹಿರಿಯರು, ಕಿರಿಯರು ಎಲ್ಲರೂ ಸಹಕಾರ ನೀಡಿದ್ದಾರೆ. ನನಗೆ ವಿಶ್ವಾಸವಿದೆ. ಕಾಂಗ್ರೆಸ್ ಈ ಬಾರಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ನಾವು ಉತ್ತಮವಾದ ಆಡಳಿತ ಕೊಡುತ್ತೇವೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು