LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

8 ಸಾವಿರ ಶಾಲಾ ಕೊಠಡಿ, 4 ಸಾವಿರ ಅಂಗನವಾಡಿಗಳ ನಿರ್ಮಾಣ : ಬೊಮ್ಮಾಯಿ

ಕಲಬುರಗಿ : ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ನಿರ್ಮಾಣ ಹಾಗೂ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.



ಕಲಬುರಗಿ ತಾಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಪನೆ ಸ್ಥಾಪನೆ ನೆರವೇರಿಸಿ ಮಾತನಾಡಿದರು.ಈ ವರ್ಷ ರಾಜ್ಯದಲ್ಲಿ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.



ತಲಾ 15 ಲಕ್ಷ ರೂ.ನಂತೆ ಅನುದಾನ ನೀಡಲಾಗಿದ್ದು, ಈ ಯೋಜನೆಯಲ್ಲಿ 1500 ಅಂಗನವಾಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.



ಒಟ್ಟು 8000 ಸಾವಿರ ಶಾಲಾ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಾಣ ವಾಗಲಿದ್ದು, ಸುಮಾರು ಆರು ಸಾವಿರ ಕೊಠಡಿಗಳನ್ನು ಕರ್ನಾಟಕದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.



ಈ ಕಾರ್ಯವನ್ನು ಮೂರು ವರ್ಷ ನಿರಂತರವಾಗಿ ಮಾಡಿದರೆ, ಕರ್ನಾಟಕದಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಕೊಠಡಿಗಳ ಮೂಲಸೌಕರ್ಯದ ಕೊರತೆ ನೀಗಲಿದೆ. ಅದರ ಜೊತೆಗೆ ಮುಂದಿನ ಆಗಸ್ಟ್ 15 ರೊಳಗೆ ಎಲ್ಲಾ ಸರ್ಕಾರಿ ಶಾಲೆಗಳ ಶೌಚಾಲಯ ಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಕ್ಕಾಗಿ 250 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ