LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸರ್ವಾನುಮತದಿಂದ ಉಪ ರಾಷ್ಟ್ರಪತಿಯನ್ನಾಗಿ ಸಿ.ಪಿ.ರಾಧಾಕೃಷ್ಣನರನ್ನು ಆಯ್ಕೆ ಮಾಡಿ : ಮೋದಿ ಕರೆ

ಹೊಸದಿಲ್ಲಿ: ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವಂತೆ ವಿರೋಧ ಪಕ್ಷಗಳೂ ಸೇರಿದಂತೆ ಎಲ್ಲ ಪಕ್ಷಗಳಿಗೂ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ



ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಹಾಗೂ ಸರ್ವಾನುಮತದಿಂದ ಉಪ ರಾಷ್ಟ್ರಪತಿಯನ್ನಾಗಿ ಚುನಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಪಕ್ಷಗಳು, ವಿಶೇಷವಾಗಿ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದರು.



ಈ ಸಂಸದರ ಸಭೆಯಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಬಿಜೆಪಿ ಸೇರಿದಂತೆ ಎನ್‌ಡಿಎ ಮಿತ್ರಪಕ್ಷಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು. ಸಿ.ಪಿ. ರಾಧಾಕೃಷ್ಣನ್ ಅವರು ಬುಧವಾರ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.



ಎನ್‌ಡಿಎ ಸಂಸದರ ಸಭೆಯಲ್ಲಿ ತಮಿಳುನಾಡಿದ ಮಾಗಿದ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ರಾಜ್ಯಪಾಲರಾದ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಎನ್‌ಡಿಎ ಸಂಸದರಿಗೆ ಪರಿಚಯಿಸಿದರು. ಈ ವೇಳೆ ಅವರ ಸಾರ್ವಜನಿಕ ಸೇವೆ ಹಾಗೂ ವೈವಿಧ್ಯಮಯ ಸಾಮರ್ಥ್ಯವನ್ನು ಪ್ರಶಂಸಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ