LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಹಿಜಾಬ್ ವಿಷಯದಲ್ಲಿ ನ್ಯಾಯಮೂರ್ತಿಗಳ ವಿಭಿನ್ನ ತೀರ್ಪು : ಸಿಜೆಐ ಪೀಠಕ್ಕೆ ವರ್ಗಾವಣೆ

ಹೊಸದಿಲ್ಲಿ: ಶಾಲಾ - ಕಾಲೇಜುಗಳಲ್ಲಿ ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಮೇಲೆ ಸುಪ್ರೀಮ ಕೋರ್ಟ​ನಲ್ಲಿ ವಿಭಿನ್ನ ತೀರ್ಪು ಪ್ರಕಟವಾಯಿತು.



ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೋರ್ವರು ಹೈಕೋರ್ಟ​ ಆದೇಶವನ್ನು ರದ್ದು ಮಾಡಿದರು.



ಈ ಎರಡು ವಿಭಿನ್ನ ತೀರ್ಪಿನಿಂದ ಜನರಲ್ಲಿನ ಗೊಂದಲಕ್ಕೆ ಮತ್ತಷ್ಟು ನೀರೆರೆದಂತಾಗಿದೆ. ಇದೀಗ ಹಿಜಾಬ್​ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.



ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಮತ್ತೋರ್ವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಬಾಜ್​ ನಿಷೇಧ​ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದರು. ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.



ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ಅವಕಾಶವಿಲ್ಲ. ಮುಂದಿನ ತೀರ್ಪು ಬರುವವರೆಗೂ ಹೈಕೋರ್ಟ​ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.



ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಿದ್ದು, ಮುಂದೆ ಸಿಜೆಐ ಅವರು ವಿಸ್ತ್ರತ ಪೀಠ ರಚನೆ ಮಾಡಲಿದ್ದು, ಅಲ್ಲಿ ಪ್ರಕರಣ ಇತ್ಯರ್ಥ ಆಗುವ ವರೆಗೂ ಹೈಕೋರ್ಟ​ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ