LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಎರಡು ಮಕ್ಕಳ ನಿಯಮ ಜಾರಿಗೆ ಸಲ್ಲಿಸಿದ ಅರ್ಜಿ ವಜಾ 

ಹೊಸದಿಲ್ಲಿ: ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ನೀತಿ ಮತ್ತು ಎರಡು ಮಕ್ಕಳ ನಿಯಮ ಜಾರಿಗೊಳಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಮ ಕೋರ್ಟ ನಿರಾಕರಿಸಿದೆ.



ನ್ಯಾಯಮೂರ್ತಿಗಳಾದ ಎಸ್.ಕೌಲ್ ಮತ್ತು ಅಭಯ ಎಸ್. ಓಕಾ ಅವರ ಪೀಠವು, ಇದನ್ನು ಕಾನೂನು ಆಯೋಗಕ್ಕೆ ಶಿಫಾರಸು ಮಾಡುವಂತೆ ವಕೀಲ ಅಶ್ವಿನಿ ಕುಮಾರ ಉಪಾಧ್ಯಾಯ ಅವರು ಪಿಐಎಲ್ ನಲ್ಲಿ ಸಲ್ಲಿಸಿದ್ದ ಕೋರಿಕೆಯನ್ನೂ ತಿರಸ್ಕರಿಸಿತು.



ಈ ಸಾಮಾಜಿಕ ಸಮಸ್ಯೆಯನ್ನು ಸರ್ಕಾರ ನೋಡಿಕೊಳ್ಳಲಿದೆ. ಆದಾಗ್ಯೂ, ದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ಇಳಿಮುಖದಲ್ಲಿದೆ. ಅಷ್ಟಕ್ಕೂ ನ್ಯಾಯಾಲಯ ಹಸ್ತಕ್ಷೇಪ ಮಾಡುವಂತಹ ಸಮಸ್ಯೆ ಇದಲ್ಲ. ನಮಗೆ ಮಾಡಲು ಇದಕ್ಕಿಂತಲೂ ಅತ್ಯುತ್ತಮ ಕೆಲಸಗಳು ಬಾಕಿ ಇವೆ ಎಂದು ಪೀಠ ಮೌಖಿಕವಾಗಿ ಹೇಳಿದೆ.



ನಿಮಗೆ ಪ್ರಚಾರ ಬೇಕಾಗಿದೆ. ಪ್ರಚಾರ ಕೊಡುವುದು ನಮ್ಮ ಕೆಲಸವಲ್ಲ. ಈ ಅರ್ಜಿಯನ್ನು ನಾವು ಮುಂದುವರಿಸುವುದಿಲ್ಲ ಎಂದು ಅರ್ಜಿದಾರರಿಗೆ ನ್ಯಾಯಾಲಯ ತಿಳಿಸಿದೆ.



ಕೇಂದ್ರ ಸರ್ಕಾರ ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು, ಜನಸಂಖ್ಯೆ ಏರಿಕೆ ನಿಯಂತ್ರಿಸಲು ನಾವು ಏನೆಲ್ಲಾ ಮಾಡಬಹುದು ಅದೆಲ್ಲವನ್ನೂ ಮಾಡುತ್ತಿದ್ದೇವೆ ಎಂದು ಪೀಠಕ್ಕೆ ತಿಳಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ