LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅನ್ಯಥಾ ಭಾವಿಸಬೇಡಿ; ಬೆಳಗಾವಿ ಪತ್ರಕರ್ತರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನವಿ

ಬೆಳಗಾವಿ, 16: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಕೆಟ್ಟ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.



ಈ ಕುರಿತು ಹೇಳಿಕೆ ನೀಡಿರುವ ಅವರು, ಪತ್ರಕರ್ತರು ರಾಜಕೀಯಕ್ಕಿಂತ ಅಭಿವೃದ್ಧಿ ವಿಷಯದ ಮೇಲೆ ಹೆಚ್ಚಿನ ಬೆಳಕು ಚೆಲ್ಲಬೇಕು ಎನ್ನುವ ಅರ್ಥದಲ್ಲಿ ನಾನು ಮಾತನಾಡಿದ್ದೇನೆ. ಆ ಕಾರ್ಯಕ್ರಮ ಪತ್ರಕರ್ತರ ಕುಟುಂಬದೊಳಗಿನ ಕಾರ್ಯಕ್ರಮ, ಅಲ್ಲಿ ಸಾರ್ವಜನಿಕರು ಇರಲಿಲ್ಲ. ನಾನು ನಿಮ್ಮೆಲ್ಲರ ಸಹೋದರಿ ಎನ್ನುವ ಭಾವನೆಯಿಂದ ಮಾತನಾಡಿದ್ದೇನೆ. ಇದರಿಂದ ಪತ್ರಕರ್ತ ಸಹೋದರರ ಮನಸ್ಸಿಗೆ ನೋವುಂಟಾಗಬಾರದಿತ್ತು. ಹಾಗಾಗಿ ಯಾರೂ ಅನ್ಯಥಾ ಭಾವಿಸಬಾರದು ಎಂದು ಕೋರಿದ್ದಾರೆ.



ಯಾರೊಂದಿಗೂ ಜಿದ್ದಿಗೆ ಬಿದ್ದು ರಾಜಕಾರಣ ಮಾಡುವ ಮನೋಭಾವ ನನ್ನದಲ್ಲ. ಬೆಳಗಾವಿ ಪತ್ರಕರ್ತ ಸಹೋದರರೊಂದಿಗೆ ಮೊದಲಿನಿಂದಲೂ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ನನ್ನ ಈ ವರೆಗಿನ ಬೆಳವಣಿಗೆಯಲ್ಲಿ ಪತ್ರಕರ್ತ ಸಹೋದರರ ಸಹಕಾರ ಬಹಳ ದೊಡ್ಡದಿದೆ. ನಾನು ಯಾವತ್ತೂ ಪತ್ರಕರ್ತ ಸಹೋದರರನ್ನು ಗೌರವಭಾವದಿಂದಲೇ ಕಾಣುತ್ತೇನೆ. ಹಾಗಾಗಿ ಯಾವತ್ತೂ ನಾನು ಪತ್ರಕರ್ತರ ಮನಸ್ಸಿಗೆ ನೋವುಂಟು ಮಾಡುವ ಪ್ರಶ್ನೆಯೇ ಇಲ್ಲ. ಈ ವಿಷಯವನ್ನು ದೀರ್ಘಕ್ಕೆ ಕೊಂಡೊಯ್ಯುವ ಬದಲು ಇಷ್ಟಕ್ಕೇ ಮುಗಿಸೋಣ. ಸದ್ಯ ನಾನು ಬೆಂಗಳೂರಿನಲ್ಲಿದ್ದೇನೆ. ಮುಂದಿನ ದಿನಗಳಲ್ಲಿ ಎಂದಿನಂತೆ ಪರಸ್ಪರ ಸಹಕಾರದಿಂದ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಅವರು ಆಶಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ